ಹೊಸದಿಲ್ಲಿ: ಆ್ಯಂಡ್ರಾಯ್ಡ ಫೋನ್ ಗ್ರಾಹಕರೇ ಎಚ್ಚರಿಕೆಯಿಂದ ಇರಿ. ಆದಾಯ ತೆರಿಗೆ ರೀ ಫಂಡ್ ಮಾಡಿಕೊಡಲಾಗುತ್ತದೆ ಎಂಬ ಆಕರ್ಷಕ ಸಂದೇಶದ ಲಿಂಕ್ ಇರುವ ಟ್ರೋಜನ್ ಮಾಲ್ವೇರ್ ದೇಶದ ಬ್ಯಾಂಕ್ಗಳ ಗ್ರಾಹಕರಿಗೆ ಬರುತ್ತಿದೆ.
ಈಗಾಗಲೇ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ 27ಬ್ಯಾಂಕ್ಗಳ ಗ್ರಾಹಕರಿಗೆ ಇಂಥ ಸಂದೇಶ ರವಾನೆಯಾಗಿದೆ ಎಂದು ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಮಂಗಳವಾರ ಈ ಎಚ್ಚರಿಕೆ ನೀಡಿದೆ.
ಆದಾಯ ತೆರಿಗೆ ರೀ ಫಂಡ್ ಮಾಡಲಾಗುತ್ತದೆ ಎಂಬ ಆಮಿಷವಿರುವ ಸಂದೇಶ ಲಿಂಕ್ ಮೊಬೈಲ್ಗೆ ಬರುತ್ತದೆ. ಅದನ್ನು ಓಪನ್ ಮಾಡಿದಾಗ ಗ್ರಾಹಕರ ಖಾಸಗಿ ಮಾಹಿತಿಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.
ಈ ಮಾಲ್ವೇರ್ಗೆ “ಡ್ರಿನಿಕ್’ ಎಂದು ಹೆಸರಿಸಲಾಗಿದ್ದು, 2016ರಿಂದಲೇ ಅದು ಕಾರ್ಯಾಚರಿಸುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಆ್ಯಂಡ್ರಾಯ್ಡ ತಂತ್ರಜ್ಞಾನ ಇರುವ ಮೊಬೈಲ್ಗಳ ಗ್ರಾಹಕರನ್ನು ಗುರಿಯಾಗಿರಿಸಿಕೊಂಡು ಸಂದೇಶ ರವಾನೆಯಾಗುತ್ತಿದೆ ಎಂದು ಸರಕಾರದ ತಂಡ ತಿಳಿಸಿದೆ.
ರೀ ಫಂಡ್ ಹೆಸರಿನಲ್ಲಿ ಬರುವ ಲಿಂಕ್ ಆ್ಯಪ್ ಡೌನ್ಲೋಡ್ ಮಾಡಲು ಸೂಚಿಸುತ್ತದೆ. ಎಸ್ಎಂಎಸ್, ಕಾಲ್ ಲಾಗ್, ಕಾಂಟಾಕ್ಟ್ಸ್ ಸೇರಿದಂತೆ ಹಲವು ವಿಭಾಗಗಳ ಪ್ರವೇಶಕ್ಕೆ ಅನುಮತಿ ಕೇಳುತ್ತದೆ. ಅದಕ್ಕೆ ಅವಕಾಶ ನೀಡಕೂಡದು ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.
ಅಂಥ ಸಮಸ್ಯೆಗಳು ಕಂಡುಬಂದಲ್ಲಿ incident@cert-in.org.in ಗೆ ಇ-ಮೇಲ್ ಮೂಲಕ ದೂರು ಸಲ್ಲಿಸಲು ಅವಕಾಶ ಇದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ