ಮಂಗಳೂರು: ಹೊಸ ಅಮಾನವೀಯ ಕಾನೂನುಗಳ ಮೂಲಕ ನಾಗರಿಕರನ್ನು ಸ್ವಂತ ನೆಲದಿಂದ ಹೊರಹಾಕುವ ನೆಪ ಒಡ್ಡಿ ಅನ್ಯಾಯವಾಗಿ ದೌರ್ಜನ್ಯಗಳ ಮೂಲಕ ಮಾನವ ಹಕ್ಕುಗಳನ್ನು ದಮನಿಸುವುದನ್ನು ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಖಂಡಿಸುತ್ತದೆ ಎಂದು ಸಂಘಟನೆಯ ಅಧ್ಯಕ್ಷ ಅಬ್ದುಲ್ ಲತೀಫ್ ಸ’ಅದಿ ಶಿವಮೊಗ್ಗ ರವರು ಹೇಳಿದರು.ಮಂಗಳೂರಿನ ಸಮೀಪದ ಮಿತ್ತೂರಿನಲ್ಲಿ ನಡೆದ ರಾಜ್ಯ ಸೆಕ್ರೆಟರಿಯೇಟ್ ಸಭೆಯಲ್ಲಿ ಈ ಖಂಡನೆಯನ್ನು ನೀಡಲಾಯಿತು.
ಯಾವುದೇ ಕಾರಣವಿಲ್ಲದೆ ಮುಸ್ಲಿಮರೆಂಬ ಏಕೈಕ ಕಾರಣದಿಂದ ಅಸ್ಸಾಮಿನ ಸರಕಾರವು ಮಿಲಿಟರಿ ಮತ್ತು ಪೋಲಿಸ್ ಪಡೆಯ ಮೂಲಕ ಅಮಾಯಕರನ್ನು ಹಿಂಸಿಸುತ್ತಿದ್ದು ಸುಮಾರು 800 ಕ್ಕೂ ಮಿಕ್ಕ ಕುಟುಂಬಗಳು ದೌರ್ಜನ್ಯಕ್ಕೀಡಾಗುತ್ತಿದೆ. ಕೂಡಲೇ ಈ ಹಿಂಸೆಯನ್ನು ಕೊನೆಗಾಣಿಸಿ ಭಾರತೀಯರಿಗೆ ರಕ್ಷಣೆಯನ್ನು ನೀಡಬೇಕು ಎಂದು ಅಸ್ಸಾಂ ಸರಕಾರ ಹಾಗೂ ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಿತು. ಇಲ್ಲವಾದಲ್ಲಿ ಸೂಕ್ತ ಕಾನೂನು ಹೋರಾಟವನ್ನು ನಡೆಸಲಾಗುವುದು ಎಂದು ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ