ದುಬೈ: ಶೈಖ್ ಮಕ್ತೂಮ್ ಬಿನ್ ಮಕ್ತೂಮ್ ಬಿನ್ ಮೊಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಅವರನ್ನು ಯುಎಇಯ ಉಪ ಪ್ರಧಾನ ಮಂತ್ರಿಯಾಗಿ ಮತ್ತು ಹಣಕಾಸು ಸಚಿವರಾಗಿ ನೇಮಿಸಲಾಗಿದೆ. ಯುಎಇಯ ಉಪಾಧ್ಯಕ್ಷ, ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರ ಶೈಖ್ ಮೊಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಅವರು ಟ್ವಿಟ್ಟರ್ ನಲ್ಲಿ ಇದನ್ನು ಘೋಷಿಸಿದರು.
ಶೈಖ್ ಮೊಹಮ್ಮದ್ ಅವರು ಶನಿವಾರ ಹೊಸ ಯುಎಇ ಕ್ಯಾಬಿನೆಟ್ ರಚನೆಯನ್ನೂ ಘೋಷಿಸಿದರು. ಅವರು ಮುಂದಿನ 50 ವರ್ಷಗಳ ಫೆಡರಲ್ ಸರ್ಕಾರದ ಕಾರ್ಯನಿರ್ವಹಣೆಗೆ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ಮುಹಮ್ಮದ್ ಬಿನ್ ಹಾದಿ ಅಲ್-ಹುಸೇನಿ ಅವರನ್ನು ಉಪ ಹಣಕಾಸು ಸಚಿವರನ್ನಾಗಿ ನೇಮಿಸಲಾಗಿದೆ. ಈ ಸ್ಥಾನವನ್ನು ಪ್ರಸ್ತುತ ಒಬೈದ್ ಅಲ್ ತಾಯರ್ ಹೊಂದಿದ್ದಾರೆ. ಅಬ್ದುಲ್ಲಾ ಬಿನ್ ಸುಲ್ತಾನ್ ಬಿನ್ ಆವದ್ ಅಲ್ ನುಐಮಿ ನ್ಯಾಯಾಂಗ ಸಚಿವರಾಗಿ ನೇಮಕಗೊಂಡಿದ್ದಾರೆ. ಡಾ. ಅಬ್ದುಲ್ ರೆಹಮಾನ್ ಅಲ್ ಅವಾರ್ ಹೊಸ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮರಿಯಮ್ ಅಲ್-ಮಾಹಿರಿಯನ್ನು ಹವಾಮಾನ ವೈಪರೀತ್ಯ ಮತ್ತು ಪರಿಸರ ಸಚಿವರಾಗಿ ಮತ್ತು ಅಬ್ದುಲ್ಲಾ ಬಿನ್ ಮುಹೈರ್ ಅಲ್-ಕತ್ಬಿಯನ್ನು ಫೆಡರಲ್ ಸುಪ್ರೀಂ ಕೌನ್ಸಿಲ್ ವ್ಯವಹಾರಗಳ ಸಚಿವರನ್ನಾಗಿ ನೇಮಿಸಲಾಗಿದೆ.ಉಪ ಪ್ರಧಾನಿಯಾಗಿ ನೇಮಕಗೊಂಡ ಶೈಖ್ ಮಕ್ತೂಮ್ ಅವರನ್ನು ಸಹೋದರರಾದ ದುಬೈ ಕ್ರೌನ್ ಪ್ರಿನ್ಸ್ ಶೈಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಟ್ವಿಟರ್ನಲ್ಲಿ ಅಭಿನಂದಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ