ದುಬೈ: ಶೈಖ್ ಮಕ್ತೂಮ್ ಬಿನ್ ಮಕ್ತೂಮ್ ಬಿನ್ ಮೊಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಅವರನ್ನು ಯುಎಇಯ ಉಪ ಪ್ರಧಾನ ಮಂತ್ರಿಯಾಗಿ ಮತ್ತು ಹಣಕಾಸು ಸಚಿವರಾಗಿ ನೇಮಿಸಲಾಗಿದೆ. ಯುಎಇಯ ಉಪಾಧ್ಯಕ್ಷ, ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರ ಶೈಖ್ ಮೊಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಅವರು ಟ್ವಿಟ್ಟರ್ ನಲ್ಲಿ ಇದನ್ನು ಘೋಷಿಸಿದರು.
ಶೈಖ್ ಮೊಹಮ್ಮದ್ ಅವರು ಶನಿವಾರ ಹೊಸ ಯುಎಇ ಕ್ಯಾಬಿನೆಟ್ ರಚನೆಯನ್ನೂ ಘೋಷಿಸಿದರು. ಅವರು ಮುಂದಿನ 50 ವರ್ಷಗಳ ಫೆಡರಲ್ ಸರ್ಕಾರದ ಕಾರ್ಯನಿರ್ವಹಣೆಗೆ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ಮುಹಮ್ಮದ್ ಬಿನ್ ಹಾದಿ ಅಲ್-ಹುಸೇನಿ ಅವರನ್ನು ಉಪ ಹಣಕಾಸು ಸಚಿವರನ್ನಾಗಿ ನೇಮಿಸಲಾಗಿದೆ. ಈ ಸ್ಥಾನವನ್ನು ಪ್ರಸ್ತುತ ಒಬೈದ್ ಅಲ್ ತಾಯರ್ ಹೊಂದಿದ್ದಾರೆ. ಅಬ್ದುಲ್ಲಾ ಬಿನ್ ಸುಲ್ತಾನ್ ಬಿನ್ ಆವದ್ ಅಲ್ ನುಐಮಿ ನ್ಯಾಯಾಂಗ ಸಚಿವರಾಗಿ ನೇಮಕಗೊಂಡಿದ್ದಾರೆ. ಡಾ. ಅಬ್ದುಲ್ ರೆಹಮಾನ್ ಅಲ್ ಅವಾರ್ ಹೊಸ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮರಿಯಮ್ ಅಲ್-ಮಾಹಿರಿಯನ್ನು ಹವಾಮಾನ ವೈಪರೀತ್ಯ ಮತ್ತು ಪರಿಸರ ಸಚಿವರಾಗಿ ಮತ್ತು ಅಬ್ದುಲ್ಲಾ ಬಿನ್ ಮುಹೈರ್ ಅಲ್-ಕತ್ಬಿಯನ್ನು ಫೆಡರಲ್ ಸುಪ್ರೀಂ ಕೌನ್ಸಿಲ್ ವ್ಯವಹಾರಗಳ ಸಚಿವರನ್ನಾಗಿ ನೇಮಿಸಲಾಗಿದೆ.ಉಪ ಪ್ರಧಾನಿಯಾಗಿ ನೇಮಕಗೊಂಡ ಶೈಖ್ ಮಕ್ತೂಮ್ ಅವರನ್ನು ಸಹೋದರರಾದ ದುಬೈ ಕ್ರೌನ್ ಪ್ರಿನ್ಸ್ ಶೈಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಟ್ವಿಟರ್ನಲ್ಲಿ ಅಭಿನಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ