ಕುವೈತ್ನಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೆಲಸದ ಪರವಾನಗಿಯನ್ನು ನವೀಕರಿಸದಿರುವ ನಿರ್ಧಾರವು ಹೊಸಬರಿಗೆ ಮಾತ್ರ ಅನ್ವಯಿಸುವಂತೆ ಬೇಡಿಕೆ. ಕುವೈಟ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಸರ್ಕಾರಕ್ಕೆ ಇಂತಹ ವಿನಂತಿಯನ್ನು ಮಾಡಿದೆ.
ಪ್ರಧಾನಿಗೆ ಬರೆದ ಪತ್ರದಲ್ಲಿ, ಚೇಂಬರ್ ಆಫ್ ಕಾಮರ್ಸ್ ಈ ನಿಬಂಧನೆಯು ದೇಶದಲ್ಲಿ ವರ್ಷಗಳ ಕಾಲ ಕೆಲಸ ಮಾಡುತ್ತಿರುವ ವಿದೇಶಿಯರಿಗೆ ಅನ್ವಯಿಸಬಾರದು ಎಂದು ವಿನಂತಿಸಿದೆ. ವಿವಿಧ ಕ್ಷೇತ್ರಗಳಲ್ಲಿ ವರ್ಷಗಳ ಅನುಭವ ಹೊಂದಿರುವ ವಲಸಿಗರ ಸೇವೆಗಳನ್ನು ಕೊನೆಗೊಳಿಸಬೇಕಾಗಿರುವುದು ಕಾರ್ಮಿಕ ಮಾರುಕಟ್ಟೆಗೆ ಭಾರೀ ನಷ್ಟವಾಗಲಿದೆ ಮತ್ತು ಕಾರ್ಮಿಕರ ಸೇವೆಯನ್ನು ಕಡೆಗಣಿಸಲಾಗದು ಎಂದು ಚೇಂಬರ್ ಗಮನಸೆಳೆದಿದೆ.
60 ವರ್ಷಕ್ಕಿಂತ ಮೇಲ್ಪಟ್ಟ ಪದವೀಧರರಲ್ಲದ ವಿದೇಶಿಯರ ರೆಸಿಡೆನ್ಸಿಯನ್ನು ನವೀಕರಿಸಲು ಭಾರೀ ಶುಲ್ಕ ಈಡು ಮಾಡುವ ಕ್ರಮದ ವಿರುದ್ಧ ಸಂಸತ್ತಿನ ಸದಸ್ಯರು ಕೂಡಾ ಮುಂದೆ ಬಂದಿದ್ದಾರೆ. ಸಂಸದರಾದ ಅದ್ನಾನ್ ಅಬ್ದುಲ್ ಸಮದ್ ಮತ್ತು ಡಾ.ಮತ್ತಾರ್ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಳೆದ ಜನವರಿಯಲ್ಲಿ, ಕೌಶಲ್ಯರಹಿತ ಕಾರ್ಮಿಕರನ್ನು ಕಡಿಮೆ ಮಾಡುವ ಮೂಲಕ ದೇಶದಲ್ಲಿ ಜನಸಂಖ್ಯಾ ಸಮತೋಲನ ಸಾಧಿಸುವ ಉದ್ದೇಶದಿಂದ ಮಾನವಶಕ್ತಿ ಪ್ರಾಧಿಕಾರವು ವಯಸ್ಸಿನ ಮಿತಿಯನ್ನು ಮುಂದಿಟ್ಟಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ