ಬೆಂಗಳೂರು: ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು ಆರ್ ಎಸ್ ಎಸ್ ನಾಯಕರಿಗೆ ಗುತ್ತಿಗೆ ಕೊಟ್ಟವರಾರು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್ ಮಾಡಿದ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹಾಗೂ ಆರ್ಎಸ್ಎಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ ಎಸ್ ಎಸ್ ಎಂದ ಕೂಡಲೇ ಉರಿದುಬೀಳುವ ಸಿಟಿ ರವಿ ಅವರೇ, ಆರ್ ಎಸ್ ಎಸ್ ಎಂದರೆ ಏನು? ಅದರ ಜೊತೆ ಸಂಬಂಧ ಏನು? ಆರ್ ಎಸ್ ಎಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನು ಉತ್ಪಾದಿಸಿ ಕೊಡುವ ಕಾರ್ಖಾನೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಆರ್ ಎಸ್ ಎಸ್ ಎನ್ನುವುದು ಹಿಂದುಗಳ ಸಂಘಟನೆ ಎಂದು ನೀವು ಹೇಳುವುದಾದಾರೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬೇರೆ ಪಕ್ಷದವರು ಹಿಂದೂಗಳಲ್ಲವೇ? ದೆಹಲಿಯಲ್ಲಿ 10 ತಿಂಗಳಿಂದ ಬೀದಿಯಲ್ಲಿರುವವರು ಹಿಂದುಗಳಲ್ಲವೇ? ವಾರದ ಹಿಂದೆ ಉತ್ತರಪ್ರದೇಶದಲ್ಲಿ ಅತ್ಯಾಚಾರಕ್ಕೀಡಾದ ದಲಿತ ಯುವತಿ ಹಿಂದು ಅಲ್ಲವೇ?
ಆರ್ ಎಸ್ ಎಸ್ ಸಾಂಸ್ಕೃತಿಕ ಸಂಘಟನೆ ಎಂದಾದರೆ ಅದರ ಸಂಸ್ಕೃತಿಯ ವ್ಯಾಖ್ಯಾನವೇನು? ನಿನ್ನೆ ತಾನೆ ಮಂಗಳೂರಿನಲ್ಲಿ ಅಮಾಯಕ ವಿದ್ಯಾರ್ಥಿ-ವಿದ್ಯಾರ್ಥಿನಿಗಳ ಮೇಲೆ ನಿಮ್ಮ ಪರಿವಾರದ ಗೂಂಡಾಗಳು ನಡೆಸಿದ ದೌರ್ಜನ್ಯ ಕೂಡಾ ಈ ಸಂಸ್ಕೃತಿಯಲ್ಲಿ ಸೇರಿದೆಯೇ? ಎಂದು ಕೇಳಿದ್ದಾರೆ.
ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು ಆರ್ ಎಸ್ ಎಸ್ ನಾಯಕರಿಗೆ ಗುತ್ತಿಗೆ ಕೊಟ್ಟವರಾರು? ಆರ್ ಎಸ್ ಎಸ್ ನಾಯಕರೇನು ಜನರಿಂದ ಚುನಾಯಿತರಾದ ನಾಯಕರೇ? ಅವರು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು?ನಿಮ್ಮ ಎರಡು ಸಂಘಟನೆಗಳ ನಡುವೆ ಮುಖ ಯಾವುದು? ಮುಖವಾಡ ಯಾವುದು?
ನಾನು ಮತ್ತು ನನ್ನಂತಹ ಕೋಟ್ಯಂತರ ಜನ ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ. ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿಟಿ ರವಿ ಅವರೇ, ನಿಮ್ಮನ್ನು ರೈತನ ಮಗ ಎನ್ನುತ್ತೀರಿ,ನಾನು ಉಡುವ ರೈತ ಮಕ್ಕಳ ಪಂಚೆಯನ್ನು ಗೇಲಿ ಮಾಡುತ್ತೀರಿ.ನಿಮ್ಮ ತಂದೆ ಕೂಡಾ ಪಂಚೆ ಉಡುವವರು ಎಂದು ಅಂದುಕೊಳ್ತೀನಿ. ನಿಮ್ಮಂತಹ ಮಗನ ಬಗ್ಗೆ ಅವರೇನು ಅಂದುಕೊಳ್ಳಬಹುದು ಯೋಚಿಸಿದ್ದೀರಾ? ಈ ರೀತಿ ನಾಲಿಗೆ ಸಡಿಲ ಬಿಟ್ಟು ಮನೆಗೆ ಹೋಗುವಾಗ ಹುಷಾರಾಗಿರಿ ಎಂದು ತಿವಿದಿದ್ದಾರೆ.
ಕೊನೆಯದಾಗಿ ಸಿಟಿ ರವಿ ಅವರೇ? ಕಣ್ಣಿಗೆ ಪೊರೆ ಬಂದವರು ಕತ್ತಲಲ್ಲಿ ಕಾರು ಚಲಾಯಿಸಬಾರದು, ಅಪಘಾತವಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಾರೆ. ಪೊರೆ ಬಂದಿದ್ದರೆ ಕ್ಯಾಟಾರಕ್ಟ್ ಮಾಡಿಸಿಕೊಳ್ಳಿ. ಸಾರ್ವಜನಿಕರ ಜೀವ ಮುಖ್ಯ ಎಂದು ಟ್ವಿಟ್ಟರ್ನಲ್ಲಿ ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ