ಕುವೈತ್ ಸಿಟಿ :ಭಾರತದಲ್ಲಿ ಮುಸ್ಲಿಮರ ಮೇಲೆ ಮರುಕಳಿಸುತ್ತಿರುವ ದೌರ್ಜನ್ಯಗಳ ವಿರುದ್ಧ ಕುವೈತ್ ಸಂಸದರು ಜಂಟಿ ಹೇಳಿಕೆಯನ್ನು ನೀಡಿದ್ದಾರೆ. ಅಸ್ಸಾಂನಲ್ಲಿನ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದ್ದು, ಅಂತರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸುವಂತೆ ಹೇಳಿಕೆಯಲ್ಲಿ ಕರೆ ನೀಡಲಾಗಿದೆ.
ಮುಸ್ಲಿಮರನ್ನು ಕೊಲ್ಲುವುದು ಮತ್ತು ತಮ್ಮ ಮನೆಗಳಿಂದ ಹೊರಹಾಕುವುದು ಭಾರತದಲ್ಲಿ ಪುನರಾವರ್ತನೆಯಾಗುತ್ತಿದೆ. ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು ಮತ್ತು ಇದನ್ನು ಕೊನೆಗೊಳಿಸಬೇಕು. ಭಾರತೀಯ ಮುಸ್ಲಿಮರು ತಮ್ಮ ದೇಶದಲ್ಲಿ ಶಾಂತಿಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ.ಅದನ್ನು ನಿರಾಕರಿಸುವ ರೀತಿಯಲ್ಲಿ ನಡೆಸುವ ಸಂಘಟಿತ ಹಿಂಸೆಯನ್ನು ಯುದ್ಧ ಅಪರಾಧವೆಂದು ಪರಿಗಣಿಸಿ ಅಂತರಾಷ್ಟ್ರೀಯ ಸಮುದಾಯವು ಮಧ್ಯೆ ಪ್ರವೇಶಿಸಬೇಕು.
ಹಿಂದುತ್ವ ಶಕ್ತಿಗಳ ದಾಳಿಯನ್ನು ಭಾರತೀಯ ಸರ್ಕಾರ ಖಂಡಿಸುವುದಿಲ್ಲ ಮತ್ತು ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ಕುವೈತ್ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಕುರಿತು ಹೇಳಿಕೆ ನೀಡಬೇಕು ಎಂದು ಸಂಸದರು ಆಗ್ರಹಿಸಿದ್ದಾರೆ.
ಅವ್ಖಾಫ್ ಸಚಿವಾಲಯವು ಸಂತ್ರಸ್ತರಿಗಾಗಿ ಪ್ರಾರ್ಥಿಸುವಂತೆ ಇಮಾಮ್ಗಳಿಗೆ ನಿರ್ದೇಶನ ನೀಡಬೇಕು. ಮುಸ್ಲಿಂ ಬಾಂಧವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ಇಸ್ಲಾಮಿಕ್ ಸಂಸ್ಥೆಗಳು ಮಧ್ಯಪ್ರವೇಶಿಸಬೇಕು ಎಂದು ಸಂಸದರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ