ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯು ಆಯೋಜಿಸುವ ಇಶ್ಕ್ ಎ ರಸೂಲ್ (ﷺ ) ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ 2021 ಅಕ್ಟೋಬರ್ 8 ಶುಕ್ರವಾರ ರಾತ್ರಿ ಬಹರೈನ್ ಸಮಯ 8 ಗಂಟೆಗೆ ಸರಿಯಾಗಿ ಝೂಮ್ ಮುಖಾಂತರ ನಡೆಯಲಿದೆ.
ರಾಷ್ಟೀಯ ಸಮಿತಿ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರಾದ ಅಸ್ಸಯ್ಯಿದ್ ಅಲೀ ಬಾಫಕಿ ತಂಙಳ್ ರವರು ದುವಾಶೀರ್ವಚನ ನಡೆಸಲಿದ್ದಾರೆ.
ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು ರವರು ಉದ್ಘಾಟನೆ ಮಾಡಲಿರುವ ಸಮಾರಂಭದಲ್ಲಿ ಮದನೀಯಂ ಕಾರ್ಯಕ್ರಮದ ಮೂಲಕ ಜನ ಸಾಗರದ ಮನ ಗೆದ್ದ
ಅಬ್ದುಲ್ಲತೀಫ್ ಸಖಾಫಿ ಕಾಂತಪುರಂ ರವರು ಮುಖ್ಯ ಪ್ರಭಾಷಣವನ್ನು ಮಾಡಲಿದ್ದಾರೆ.
ಆನ್ಲೈನ್ ಮೂಲಕ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಯಶಸ್ವಿಗೊಳಿಸಬೇಕಾಗಿ ಮೀಲಾದ್ ಸಮಿತಿ ಚೇರ್ಮ್ಯಾನ್ ಜನಾಬ್ ಅಲೀ ಮುಸ್ಲಿಯಾರ್, ವೈಸ್ ಚೇರ್ಮ್ಯಾನ್ ಬಶೀರ್ ಕಾರ್ಲೆ, ಜನರಲ್ ಕನ್ವೀನರ್ ಇಬ್ರಾಹಿಂ ಸಅದಿ ಹಾಗೂ ಫೈನಾನ್ಸ್ ಸೆಕ್ರೆಟರಿ ರಿಯಾಜ್ ಸುಳ್ಯ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ