ಬೆಂಗಳೂರು: ಉತ್ತರ ಪ್ರದೇಶದಲ್ಲಿ ಹಿಂಸಾಚಾರದಲ್ಲಿ ಮೃತ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ಯುಪಿಯಲ್ಲಿ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ ಎಂದಿದ್ದಾರೆ.. ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ಸರ್ಕಾರ
ತನ್ನ ತಾಲಿಬಾನಿ ಮನಸ್ಥಿತಿಯನ್ನು ಬತ್ತಲು ಮಾಡಿಕೊಳ್ಳುತ್ತಿದೆ.
ರೈತರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ಕೃತ್ಯ ಖಂಡನೀಯ ಎಂದಿದ್ದಾರೆ.
ಉತ್ತರಪ್ರದೇಶದ ಗೂಂಡಾ ರಾಜ್ಯದಲ್ಲಿ ದಲಿತರು,ರೈತರು, ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದುಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ
ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಶತ್ರುಗಳು ಎಂದು ಅವರನ್ನು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಕೊಂಡ ಕ್ರಮ ಕಾನೂನುಬಾಹಿರ ಎಂದಿದ್ದಾರೆ. ರೈತರ ಸಾವಿಗೆ ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬದಲು, ನ್ಯಾಯ ಕೇಳುವವರನ್ನು ನೀವು ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ