ಪುಂಜಾಲಕಟ್ಟೆ,ಅ.5: ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಇಸ್ಲಾಂ ಧರ್ಮ ಮತ್ತು ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ ಸ.ಅ ರನ್ನು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುತ್ತಾರೆ. ಇದು ವಿಶ್ವದಲ್ಲಿರುವ ಪ್ರವಾದಿ ಅನುಯಾಯಿಗಳ ಮನಸ್ಸಿಗೆ ತೀವ್ರ ನೋವನ್ನು ತರಿಸಿದ್ದು ಮಾತ್ರವಲ್ಲ ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದಿಸಿದಂತಾಗಿದೆ. ಆದರೆ ದೇಶದ ಸಂವಿಧಾನದ ಮೇಲೆ ವಿಶ್ವಾಸವಿರುವ ಮುಸಲ್ಮಾನರು ತಾಳ್ಮೆ ವಹಿಸಿ ಶಾಂತಿಯನ್ನು ಕಾಪಾಡಿಕೊಂಡು ಬಂದಿರುತ್ತಾರೆ.
ಆದ್ದರಿಂದ ಮಾನ್ಯ ಪೊಲೀಸ್ ಅಧಿಕಾರಿಗಳು ಕೂಡಲೇ ಘೋಷಣೆ ಕೂಗಿದಂತಹ ಎಲ್ಲಾ ಕಿಡಿಗೇಡಿಗಳನ್ನು ಮತ್ತು ಕಾರ್ಯಕ್ರಮವನ್ನು ಆಯೋಜಿಸಿದಂತಹ ಸಂಘಟಕರ ಮೇಲೆ ಕಠಿನ ಕಾನೂನು ಕ್ರಮ ಜರಗಿಸಿಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ವತಿಯಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಯಿತು.







