ಬೆಂಗಳೂರು, ಅ.5: ಬೆಳಗಾವಿಯಲ್ಲಿ ನಡೆದ ಮುಸ್ಲಿಂ ಯುವಕನ ಕೊಲೆ ದೇಶದಲ್ಲಿರುವ ಕೋಮುವಾದವನ್ನು ಪ್ರತಿಪಾದಿಸುತ್ತಿದೆ. ಸರಕಾರವು ಇಂತಹ ವಿಷಯಗಳ ಬಗ್ಗೆ ಕಾಲಹರಣ ಮಾಡುತ್ತಿರುವುದು ಖಂಡನೀಯ. ಇದು ಆಡಳಿತ ಪಕ್ಷದ ಕೀಳು ಸ್ವರೂಪವನ್ನು ಎತ್ತಿ ತೋರಿಸುತ್ತಿದೆ. ಅದಲ್ಲದೇ ಮುಸಾಲ್ಮಾನರ ಕುರಿತು ಇರುವ ಅಪಪ್ರಚಾರ(ಇಸ್ಲಾಮೋಫೋಬಿಯಾ)ವನ್ನು ನಿಲ್ಲಿಸಬೇಕು ಎಂದು ಎಐಎಸ್ಎ (ಅಖಿಲ ಭಾರತ ವಿದ್ಯಾರ್ಥಿ ಸಂಘ)ನ ರಾಜ್ಯ ಸಂಚಾಲಕ ಪಿ.ಎ. ದೇವಯ್ಯ ತಿಳಿಸಿದ್ದಾರೆ.
ಅರ್ಬಾಝ್ ಮುಲ್ಲ ಕೊಲೆಯನ್ನು ಖಂಡಿಸಿ, ಮಂಗಳವಾರ ಸಂಜೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದೊಂದಿಗೆ ಜೊತೆಗೂಡಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಮೇಣದಬತ್ತಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಏಳು ವರ್ಷಗಳಿಂದ ಶೇ.26ರಷ್ಟು ಕೋಮುವಾದಿ ಪ್ರಕರಣಗಳು ದೇಶದಲ್ಲಿ ನಡೆದಿವೆ. ಕೋಮುವಾದಿ ವಿಚಾರದಲ್ಲಿ ರಾಜ್ಯವು 5ನೇ ಸ್ಥಾನದಲ್ಲಿದೆ. ಹೀಗಿರುವಾಗಲೂ ಸರಕಾರವು ಕೋಮುಗಲಭೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಆದುದರಿಂದಲೇ ಬೆಳಗಾವಿಯಲ್ಲಿ ಮತ್ತೊಂದು ಕೋಮುವಾದಿ ಕೊಲೆಯಾಗಿದೆ ಎಂದು ಅವರು ಆರೋಪಿಸಿದರು.
ಲಾ ಫೋರಂನ ಸದಸ್ಯ ವಿನಯ್ ಶ್ರೀನಿವಾಸ್ ಮಾತನಾಡಿ, ಸರಕಾರವು ದ್ವೇಷದ ವಾತಾವರಣ ಸೃಷ್ಟಿ ಮಾಡುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಯು ಬೆಳಗಾವಿಯ ಕೋಮುವಾದಿ ಕೊಲೆಯನ್ನು ವಿರೋಧಿಸಬೇಕು. ಅಪರಾಧಿಗಳಿಗೆ ಕಾನೂನಾತ್ಮಕ ಶಿಕ್ಷೆಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರೀತಿಸುವ ಹಕ್ಕಿದೆ. ಅದನ್ನು ವಿರೋಧಿಸಿ ಕೊಲೆ ನಡೆದಿದೆ. ಕೇವಲ ಧರ್ಮದ ಹಿನ್ನೆಲೆಯಲ್ಲಿಯೇ ಕೊಲೆಯಾಗಿದೆ. ಇದಕ್ಕೆ ಸರಕಾರವು ಶೀಘ್ರವಾಗಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಹೇಳಿದರು.
ಕೇವಲ ಅನ್ಯ ಧರ್ಮದ ಯುವತಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ಕೊಲೆ ಮಾಡಿರುವುದು ಪ್ರಜಾಪ್ರಭತ್ವದ ಕಗ್ಗೊಲೆಯಾಗಿದೆ. ರಾಮಸೇನೆಯ ಕಾರ್ಯಕರ್ತರೇ ತಪ್ಪೊಪ್ಪಿಕೊಂಡಿದ್ದರೂ ಸರಕಾರವು ಈ ಕುರಿತು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಂತಹ ಹಿಂದುತ್ವ ರಾಜ್ಯ ನಮಗೆ ಬೇಕಾಗಿಲ್ಲ ಎಂದು ಅಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ನ ವಕೀಲೆ ಅವನಿ ತಿಳಿಸಿದರು.
ಪ್ರತಿಭಟನೆಯಲ್ಲಿ ಕಿಶಾನ್, ಡಾ.ಶಿವ್ಯ, ಕ್ಯಾಪ್ಟನ್ ಮೋಹನ್ ರಾವ್, ಆಕಾಶ್ ಭಟ್ಟಾಚಾರ್ಯ, ಕೆಫೆನ್ ರೊಸಾನಿಯೋ ಮತ್ತಿತರರು ಉಪಸ್ಥಿತಿಯಲ್ಲಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ