ಹೊಸದಿಲ್ಲಿ: ಉತ್ತರಪ್ರದೇಶದ ಲಖಿಂಪುರಖೇರಿ ಜಿಲ್ಲೆಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ತನ್ನ ಪುತ್ರ ಕಾರನ್ನು ಚಲಾಯಿಸಿದ ಆರೋಪವನ್ನು ಎದುರಿಸುತ್ತಿರುವ ನಡುವೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಘಟನೆಗೆ ಸಂಬಂಧಿಸಿ ವಿಪಕ್ಷಗಳು ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸುತ್ತಿವೆ.
ಲಖಿಂಪುರ್ ಖೇರಿಯಲ್ಲಿ ರವಿವಾರ ಕಾರ್ಯಕ್ರಮಕ್ಕಾಗಿ ಅಜಯ್ ಮಿಶ್ರಾ ಭೇಟಿ ನೀಡಿದ ವೇಳೆ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.
ಸಚಿವರ ಬೆಂಗಾವಲಿನಲ್ಲಿದ್ದ ಕಾರೊಂದು ಪ್ರತಿಭಟನಾಕಾರರ ಮೇಲೆ ಹರಿದಿದೆ ಎಂದು ಆರೋಪಿಸಲಾಗಿದೆ. ಕಾರನ್ನು ಸಚಿವರ ಮಗ ಆಶಿಶ್ ಮಿಶ್ರಾ ಚಾಲನೆ ಮಾಡಿದ್ದಾನೆ ಎಂದು ರೈತರು ಆರೋಪಿಸಿದ್ದಾರೆ.
ಸಚಿವರು ಹಾಗೂ ಆಶಿಶ್ ಮಿಶ್ರಾ ಅವರು ತಾವು ಘಟನಾ ಸ್ಥಳದಲ್ಲಿ ಇರಲಿಲ್ಲ. ಘಟನೆಗೂ, ತಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಆದರೆ ರೈತರ ಮೇಲೆ ಹರಿದಿದ್ದ ಕಾರು ತಮ್ಮದ್ದೆಂದು ಒಪ್ಪಿಕೊಂಡಿದ್ದಾರೆ.
ಉತ್ತರಪ್ರದೇಶ ಪೊಲೀಸರು ಆಶೀಶ್ ಮಿಶ್ರಾ ವಿರುದ್ದ ಹತ್ಯೆ ಕೇಸನ್ನು ದಾಖಲಿಸಿಕೊಂಡಿದ್ದಾರೆ. ಆದರೆ ಈ ತನಕ ಆತನ ಬಂಧನವಾಗಿಲ್ಲ .
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ