ಹೊಸದಿಲ್ಲಿ: ಉತ್ತರಪ್ರದೇಶದ ಲಖಿಂಪುರಖೇರಿ ಜಿಲ್ಲೆಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ತನ್ನ ಪುತ್ರ ಕಾರನ್ನು ಚಲಾಯಿಸಿದ ಆರೋಪವನ್ನು ಎದುರಿಸುತ್ತಿರುವ ನಡುವೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಘಟನೆಗೆ ಸಂಬಂಧಿಸಿ ವಿಪಕ್ಷಗಳು ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸುತ್ತಿವೆ.
ಲಖಿಂಪುರ್ ಖೇರಿಯಲ್ಲಿ ರವಿವಾರ ಕಾರ್ಯಕ್ರಮಕ್ಕಾಗಿ ಅಜಯ್ ಮಿಶ್ರಾ ಭೇಟಿ ನೀಡಿದ ವೇಳೆ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.
ಸಚಿವರ ಬೆಂಗಾವಲಿನಲ್ಲಿದ್ದ ಕಾರೊಂದು ಪ್ರತಿಭಟನಾಕಾರರ ಮೇಲೆ ಹರಿದಿದೆ ಎಂದು ಆರೋಪಿಸಲಾಗಿದೆ. ಕಾರನ್ನು ಸಚಿವರ ಮಗ ಆಶಿಶ್ ಮಿಶ್ರಾ ಚಾಲನೆ ಮಾಡಿದ್ದಾನೆ ಎಂದು ರೈತರು ಆರೋಪಿಸಿದ್ದಾರೆ.
ಸಚಿವರು ಹಾಗೂ ಆಶಿಶ್ ಮಿಶ್ರಾ ಅವರು ತಾವು ಘಟನಾ ಸ್ಥಳದಲ್ಲಿ ಇರಲಿಲ್ಲ. ಘಟನೆಗೂ, ತಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಆದರೆ ರೈತರ ಮೇಲೆ ಹರಿದಿದ್ದ ಕಾರು ತಮ್ಮದ್ದೆಂದು ಒಪ್ಪಿಕೊಂಡಿದ್ದಾರೆ.
ಉತ್ತರಪ್ರದೇಶ ಪೊಲೀಸರು ಆಶೀಶ್ ಮಿಶ್ರಾ ವಿರುದ್ದ ಹತ್ಯೆ ಕೇಸನ್ನು ದಾಖಲಿಸಿಕೊಂಡಿದ್ದಾರೆ. ಆದರೆ ಈ ತನಕ ಆತನ ಬಂಧನವಾಗಿಲ್ಲ .
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ