ದುಬೈ | ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್, ಭಾರತದ ಗ್ರ್ಯಾಂಡ್ ಮುಫ್ತಿ ಮತ್ತು ಜಾಮಿಯಾ ಮರ್ಕಝ್ ಚಾನ್ಸೆಲರ್ ಅವರನ್ನು ಯುಎಇ ಸರ್ಕಾರವು ಗೋಲ್ಡನ್ ವೀಸಾ (UAE Golden Visa) ನೀಡಿ ಗೌರವಿಸಿದೆ. ಭಾರತ ಮತ್ತು ಇತರೆಡೆಗಳಲ್ಲಿ ಕಾಂತಪುರಂ ಉಸ್ತಾದರು ಮಾಡಿದ ಸಾಮಾಜಿಕ ಮತ್ತು ದತ್ತಿ ಕಾರ್ಯಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಯುಎಇ ಮತ್ತು ಜಾಮಿಯಾ ಮರ್ಕಝ್ ನಡುವಿನ ಅಂತರರಾಷ್ಟ್ರೀಯ ಸಂಬಂಧ, ಶೈಕ್ಷಣಿಕ ವಿನಿಮಯ ಮತ್ತು ದತ್ತಿ ಚಟುವಟಿಕೆಗಳು ಗೌರವಕ್ಕೆ ಪ್ರಮುಖ ಕಾರಣವಾಗಿವೆ.
ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಿ, ಹತ್ತು ವರ್ಷಗಳ ಗೋಲ್ಡನ್ ವೀಸಾವನ್ನು ಯುಎಇ ಸರ್ಕಾರವು ನೀಡುತ್ತಿದೆ. ಶಿಕ್ಷಣ ಮತ್ತು ದತ್ತಿ ಚಟುವಟಿಕೆಗಳಿಗಾಗಿ ಭಾರತದಿಂದ ಗೋಲ್ಡನ್ ವೀಸಾ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ ಕಾಂತಪುರಂ ಉಸ್ತಾದ್.
ಭಾರತದ ಗ್ರಾಂಡ್ ಮುಫ್ತಿ, ಜಾಮಿಯಾ ಮರ್ಕಝ್ ಚಾನ್ಸೆಲರ್, ಅತ್ಯುತ್ತಮ ಸಾಮಾಜಿಕ ಲೋಕೋಪಕಾರಿ, ಮತ್ತು ಅರಬಿಕ್ ಸೇರಿದಂತೆ ಹಲವು ಭಾಷೆಗಳಲ್ಲಿ ಉಪನ್ಯಾಸ ನೀಡುವ ಅವರ ಸಾಮರ್ಥ್ಯ ಸೇರಿದಂತೆ ಅರಬ್ ಜಗತ್ತು ಮತ್ತು ಅಂತಾರಾಷ್ಟ್ರೀಯ ರಂಗಗಳಲ್ಲಿ ಕಾಂತಪುರಂ ಉಸ್ತಾದರು ಮಹತ್ವದ ಪ್ರಭಾವವನ್ನು ಹೊಂದಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ, ಶೈಖ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್, ಯುನೈಟೆಡ್ ಅರಬ್ ಎಮಿರೇಟ್ಸ್ ನ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರ ಶೈಖ್ ಮೊಹಮ್ಮದ್ ಬಿನ್ ರಾಶೀದ್ ಆಲ್ ಮಕ್ತೂಮ್, ಮತ್ತು ಅಬುಧಾಬಿಯ ರಾಜಕುಮಾರ, ಮತ್ತು ಯುಎಇ ಸಶಸ್ತ್ರ ಪಡೆಗಳ ಉಪ ಕಮಾಂಡರ್ -ಇನ್ -ಚೀಫ್ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಮುಂತಾದವರು ಗೋಲ್ಡನ್ ವೀಸಾಗೆ ಕೃತಜ್ಞರಾಗಿರುತ್ತಾರೆ ಎಂದು ಕಾಂತಪುರಂ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ