ದುಬೈ | ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್, ಭಾರತದ ಗ್ರ್ಯಾಂಡ್ ಮುಫ್ತಿ ಮತ್ತು ಜಾಮಿಯಾ ಮರ್ಕಝ್ ಚಾನ್ಸೆಲರ್ ಅವರನ್ನು ಯುಎಇ ಸರ್ಕಾರವು ಗೋಲ್ಡನ್ ವೀಸಾ (UAE Golden Visa) ನೀಡಿ ಗೌರವಿಸಿದೆ. ಭಾರತ ಮತ್ತು ಇತರೆಡೆಗಳಲ್ಲಿ ಕಾಂತಪುರಂ ಉಸ್ತಾದರು ಮಾಡಿದ ಸಾಮಾಜಿಕ ಮತ್ತು ದತ್ತಿ ಕಾರ್ಯಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಯುಎಇ ಮತ್ತು ಜಾಮಿಯಾ ಮರ್ಕಝ್ ನಡುವಿನ ಅಂತರರಾಷ್ಟ್ರೀಯ ಸಂಬಂಧ, ಶೈಕ್ಷಣಿಕ ವಿನಿಮಯ ಮತ್ತು ದತ್ತಿ ಚಟುವಟಿಕೆಗಳು ಗೌರವಕ್ಕೆ ಪ್ರಮುಖ ಕಾರಣವಾಗಿವೆ.
ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಿ, ಹತ್ತು ವರ್ಷಗಳ ಗೋಲ್ಡನ್ ವೀಸಾವನ್ನು ಯುಎಇ ಸರ್ಕಾರವು ನೀಡುತ್ತಿದೆ. ಶಿಕ್ಷಣ ಮತ್ತು ದತ್ತಿ ಚಟುವಟಿಕೆಗಳಿಗಾಗಿ ಭಾರತದಿಂದ ಗೋಲ್ಡನ್ ವೀಸಾ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ ಕಾಂತಪುರಂ ಉಸ್ತಾದ್.
ಭಾರತದ ಗ್ರಾಂಡ್ ಮುಫ್ತಿ, ಜಾಮಿಯಾ ಮರ್ಕಝ್ ಚಾನ್ಸೆಲರ್, ಅತ್ಯುತ್ತಮ ಸಾಮಾಜಿಕ ಲೋಕೋಪಕಾರಿ, ಮತ್ತು ಅರಬಿಕ್ ಸೇರಿದಂತೆ ಹಲವು ಭಾಷೆಗಳಲ್ಲಿ ಉಪನ್ಯಾಸ ನೀಡುವ ಅವರ ಸಾಮರ್ಥ್ಯ ಸೇರಿದಂತೆ ಅರಬ್ ಜಗತ್ತು ಮತ್ತು ಅಂತಾರಾಷ್ಟ್ರೀಯ ರಂಗಗಳಲ್ಲಿ ಕಾಂತಪುರಂ ಉಸ್ತಾದರು ಮಹತ್ವದ ಪ್ರಭಾವವನ್ನು ಹೊಂದಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ, ಶೈಖ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್, ಯುನೈಟೆಡ್ ಅರಬ್ ಎಮಿರೇಟ್ಸ್ ನ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರ ಶೈಖ್ ಮೊಹಮ್ಮದ್ ಬಿನ್ ರಾಶೀದ್ ಆಲ್ ಮಕ್ತೂಮ್, ಮತ್ತು ಅಬುಧಾಬಿಯ ರಾಜಕುಮಾರ, ಮತ್ತು ಯುಎಇ ಸಶಸ್ತ್ರ ಪಡೆಗಳ ಉಪ ಕಮಾಂಡರ್ -ಇನ್ -ಚೀಫ್ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಮುಂತಾದವರು ಗೋಲ್ಡನ್ ವೀಸಾಗೆ ಕೃತಜ್ಞರಾಗಿರುತ್ತಾರೆ ಎಂದು ಕಾಂತಪುರಂ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು