ಬೆಂಗಳೂರು, ಅ.8: ಈದ್ ಮಿಲಾದ್ ಹಬ್ಬ ಮತ್ತು ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ.ರಾಜ್ಯದ ವಿವಿಧ ಕಡೆ ಅ.19, 20 ರಂದು ನಡೆಯುವ ಈದ್ ಮಿಲಾದ್ ಹಬ್ಬ ಮತ್ತು ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕಂದಾಯ ಇಲಾಖೆ ಹೊರಡಿಸಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿ, ಎಸ್ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಸೇರುವಂತಿಲ್ಲ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಖಗವಸು ಧರಿಸಬೇಕು, ಧ್ವನಿವರ್ಧಕಗಳ ಬಳಕೆಯನ್ನು ನಿಷೇಸಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಹಬ್ಬ ಆಚರಿಸಬೇಕು.
ಸಾಮೂಹಿಕ ಪ್ರಾರ್ಥನೆ ವೇಳೆ ಹೆಚ್ಚು ಜನರು ಆಗಮಿಸುವಂತಿಲ್ಲ. ಸ್ಯಾನಿಟೈಜರ್ ಬಳಸಬೇಕು. ಮಸೀದಿಗಳಲ್ಲಿ ಕನಿಷ್ಟ ಆರು ಅಡಿ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕು. ಹಬ್ಬದ ಸಂದರ್ಭದಲ್ಲಿ ಶಾಂತಿ-ಸೌಹಾರ್ದತೆಗೆ ಪೂರಕವಾಗಿ ಆಚರಣೆ ಮಾಡಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ಕಾಪಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಮಸೀದಿ ಹೊರತುಪಡಿಸಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಈದ್ ಮಿಲಾದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಪರಸ್ಪರ ಹಸ್ತ ಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ