ತಿರುವನಂತಪುರ: ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಚಿತ್ರವನ್ನು ಸೇರಿಸುತ್ತಿರುವ ಕುರಿತು ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರದಿಂದ ವಿವರಣೆ ಕೇಳಿದೆ.
ಕೊಟ್ಟಾಯಂನ ಕಾಡುತುರುತಿ ಮೂಲದ ಪೀಟರ್ ಮಾಳಿಪ್ಪರಂಬಿಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. ಅರ್ಜಿಯ ಪ್ರಕಾರ, ಕೋವಿಡ್ ವಿರುದ್ಧದ ರಾಷ್ಟ್ರೀಯ ಅಭಿಯಾನವು ಪ್ರಧಾನಿ ನರೇಂದ್ರ ಮೋದಿಯವರ ಅಭಿಯಾನವಾಗಿ ಮಾರ್ಪಟ್ಟಿದೆ. ಹಣ ಪಾವತಿಸಿ ಲಸಿಕೆ ಪಡೆದ ಪ್ರಮಾಣಪತ್ರದಲ್ಲಿ ಪ್ರಧಾನಿಯ ಚಿತ್ರವನ್ನು ಅಂಟಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಪ್ರಧಾನಮಂತ್ರಿಯವರ ಚಿತ್ರವನ್ನು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗಿದೆ. ಅರ್ಜಿಯ ಪ್ರಕಾರ, ಮೋದಿ ದೇಶದ ಹಣವನ್ನು ದುರುಪಯೋಗ ಪಡಿಸಿಕೊಂಡು ಒನ್ ಮ್ಯಾನ್ ಶೋ ಆಡುತ್ತಿದ್ದಾರೆ.
ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯ ಚಿತ್ರ ಸೇರಿಸುವುದನ್ನು ವಿರೋಧ ಪಕ್ಷಗಳು ತೀವ್ರ ವಿರೋಧವನ್ನು ಪ್ರಕಟಿಸಿತ್ತು.
ಇದರ ಹೊರತಾಗಿ, ವಿದೇಶಕ್ಕೆ ತೆರಳುವ ಭಾರತೀಯರು ಅಲ್ಲಿನ ಕಾನೂನಿನ ಅಡಚಣೆಯನ್ನೂ ಎದುರಿಸುವಂತಾಗಿದೆ. ಲಸಿಕೆ ಪ್ರಮಾಣಪತ್ರದಲ್ಲಿನ ಚಿತ್ರವನ್ನು ನೋಡಿ, ಅನೇಕ ಭಾರತೀಯರನ್ನು ಸೋಗಿನ ನೆಪದಲ್ಲಿ ವಿವಿಧ ವಿದೇಶಿ ವಿಮಾನ ನಿಲ್ದಾಣಗಳಲ್ಲಿನ ಉದ್ಯೋಗಸ್ಥರು ದೀರ್ಘ ಸಮಯ ತಡೆದು ನಿಲ್ಲಿಸಿದ ಪ್ರಕರಣಗಳು ನಡೆದಿದೆ.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ