ದುಬೈ: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ “ಶಾಂತಿ ವಾಹಕರೇ (ಸ) ತಾವು ಅಮರರು” ಎಂಬ ಶೀರ್ಷಿಕೆಯಲ್ಲಿ ಬೃಹತ್ ಮೀಲಾದ್ ಸಮಾವೇಶ ದುಬೈ ದೇರಾದಲ್ಲಿರುವ ಪರ್ಲ್ ಕ್ರೀಕ್ ಹೋಟೆಲ್ ನಲ್ಲಿ ಅಕ್ಟೊಬರ್ 15 ರಂದು ಶುಕ್ರವಾರ ಸಂಜೆ 6 ಘಂಟೆಗೆ ನಡೆಯಲಿದೆ.
ಪ್ರಮುಖ ಆತ್ಮೀಯ ಸುಪೀವರ್ಯರೂ, ಶಿಕ್ಷಣ ತಜ್ಞರೂ ಆದ ಬದ್ರುಸ್ಸಾದಾತ್ ಸಯ್ಯದ್ ಖಲೀಲುಲ್ ಬುಖಾರಿ ತಂಙ್ಞಳ್ (ಪ್ರಧಾನ ಕಾರ್ಯದರ್ಶಿ, ಕೇರಳ ಮುಸ್ಲಿಂ ಜಮಾಅತ್ ) ರವರು ದುಆ ನೇತೃತ್ವವನ್ನು ನೀಡಲಿದ್ದು, ಯುವ ವಾಗ್ಮಿ, ಎಸ್ಸೆಸ್ಸೆಫ್ ಕೊಡಗು ಜಿಲ್ಲಾ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಸೋಮವಾರಪೇಟೆ ಮುಖ್ಯ ಭಾಷಣ ಮಾಡಲಿದ್ದಾರೆ.
ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಯುಎಇ ಸಮಿತಿ ಅಧ್ಯಕ್ಷರಾದ ಅಬೂಬಕರ್ ಹಾಜಿ ಕೊಟ್ಟಮುಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ಪ್ರಮುಖ ಸಮಾಜ ಸೇವಕರೂ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಕುಂಜಿಲ, ಉದ್ಯಮಿಗಳಾದ ನೆಲ್ಲರ ಗ್ರೂಪ್ ಛೇರ್ಮನ್ ಶಂಸುದ್ದೀನ್ ನೆಲ್ಲರ, ಕೆಸಿಎಫ್ ಯುಎಇ ಅಧ್ಯಕ್ಷರಾದ ಜಲೀಲ್ ನಿಝಾಮಿ ಎಮ್ಮೆಮಾಡು, ಆಬಿದ್ ಕಂಡಕ್ಕರೆ (ಪ್ರಧಾನ ಕಾರ್ಯದರ್ಶಿ, ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯಾ), ಶಾಮ್ ಅಹ್ಮದ್ ನಾಪೋಕ್ಲು, ಮುಝಮ್ಮಿಲ್ ಪಾಲಿಬೆಟ್ಟ, ಝಮೀರ್ ಬೆಂಗಳೂರು ಸೇರಿದಂತೆ ಹಲವಾರು ಉಲಮಾ ಉಮರಾ ನಾಯಕರುಗಳು, ಯುಎಇ ಯಾ ಪ್ರಮುಖ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗಿನ 400ರಷ್ಟು ಜನರು ಪಾಲ್ಗೊಳ್ಳಲಿದ್ದು, ಹುಬ್ಬುರ್ರಸೂಲ್ ಭಾಷಣ, ಪ್ರಾರ್ಥನಾ ಸಂಗಮ, ಅಭಿನಂದನಾ ಸಮಾರಂಭ, ಮೌಲೂದ್ ಪಾರಾಯಣ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳು ನಡೆಯಲಿದ್ದು ಯುಎಇ ಯಲ್ಲಿರುವ ಎಲ್ಲಾ ಅನಿವಾಸಿಗಳು ಭಾಗವಹಿಸಿ ಸಹಕರಿಸಬೇಕಾಗಿ ಮೀಲಾದ್ ಸ್ವಾಗತ ಸಮಿತಿ ಛೇರ್ಮನ್ ಉಸ್ಮಾನ್ ಹಾಜಿ ನಾಪೋಕ್ಲು ಹಾಗೂ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮೂರ್ನಾಡು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ