ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.
ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಳ್ಳಲಿದೆ ಎಂದು CPIM ತೀವ್ರ ಆತಂಕ ವ್ಯಕ್ತಪಡಿಸಿದೆ.
ಬಿಜೆಪಿ ಸಂಘಪರಿವಾರ ತನ್ನ ಗುಪ್ತ ಅಜೆಂಡಾಗಳನ್ನು ಬಹಳ ವ್ಯವಸ್ಥಿತವಾಗಿ ಜಾರಿಗೊಳಿಸುತ್ತಿದ್ದು, ಶಿಕ್ಷಣ, ಉದ್ಯೋಗ,ಆರೋಗ್ಯ ಸೇರಿದಂತೆ ಜನರ ಬದುಕಿನ ವಿಚಾರಗಳನ್ನು ಬದಿಗೆ ಸರಿಸಿ ಕೇವಲ ಹಿಂದುತ್ವದ ಅಮಲನ್ನು ಯುವಜನತೆಯ ತಲೆಗೇರಿಸಿ ಕೋಮುದ್ವೇಷದಿಂದಲೇ ಜಿಲ್ಲೆಯ ರಾಜಕಾರಣವನ್ನು ನಿಯಂತ್ರಿಸುತ್ತಿದೆ.
ಇದರಿಂದಾಗಿ ಪುಂಡಪೋಕರಿಗಳು ಕಾನೂನನ್ನು ಕೈಗೆತ್ತಿ ಅಮಾಯಕರ ಮೇಲೆ ದಾಳಿ ನಡೆಸುವ ಮೂಲಕ ಸಂಘಪರಿವಾರ ತನ್ನ ತಾಲಿಬಾನ್ ಸಂಸ್ಕ್ರತಿಯನ್ನು ಪ್ರದರ್ಶಿಸುತ್ತಿದೆ.ಇದನ್ನು ಕೂಡಲೇ ಮಟ್ಟ ಹಾಕಲು ಜಿಲ್ಲೆಯ ಪೋಲಿಸ್ ಇಲಾಖೆ ಹಾಗೂ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು CPIM ಮಂಗಳೂರು ನಗರ ದಕ್ಷಿಣ ಸಮಿತಿಯು ಒತ್ತಾಯಿಸಿದೆ.
ಸುನಿಲ್ ಕುಮಾರ್ ಬಜಾಲ್
CPIM ಮಂಗಳೂರು ನಗರ ದಕ್ಷಿಣ ಸಮಿತಿ
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ