ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಾಲ್ಗಳು, ಚಿತ್ರಮಂದಿರ ಪ್ರವೇಶಿಸಲು ಕೋವಿಡ್ -19 ಲಸಿಕೆ ಪಡೆದಿರುವ ಪ್ರಮಾಣ ಪತ್ರಗಳನ್ನು ಕಡ್ಡಾಯಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾತನಾಡಿದ್ದಾರೆ.
“ಸಾಂಕ್ರಾಮಿಕ ಪರಿಸ್ಥಿತಿ ಹದಗೆಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರದಿಂದ ಹೆಚ್ಚುವರಿ ಕಣ್ಗಾವಲು ಕ್ರಮ ಕೈಗೊಳ್ಳಲಾಗುವುದು. ಮಲ್ಟಿಪ್ಲೆಕ್ಸ್ಗಳು, ಚಿತ್ರಮಂದಿರಗಳು ಮತ್ತು ಥಿಯೇಟರ್ಗಳು ಶೇ 100 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದ್ದರೂ, ಲಸಿಕೆಯ ಎರಡು ಡೋಸ್ಗಳನ್ನು ಪಡೆದವರನ್ನು ಮಾತ್ರ ಒಳಗೆ ಬಿಡಲಾಗುತ್ತದೆ. ಎರಡು ಡೋಸ್ಗಳನ್ನು ಪಡೆದಿರುವ ಪ್ರಮಾಣ ಪತ್ರವನ್ನು ಒದಗಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿಸಲಾಗುವುದು” ಎಂದು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆ ಲಸಿಕೆ ಪಡೆಯದೇ ಇರುವವರನ್ನು ಗುರುತಿಸಲು ವಿಶೇಷ ತಂಡಗಳನ್ನು ರಚನೆ ಮಾಡಿದೆ. ನಗರದಲ್ಲಿ ವಿಶೇಷ ಲಸಿಕಾ ಅಭಿಯಾನಗಳನ್ನು ನಡೆಸಲಾಗುತ್ತಿದೆ. ಈ ವೇಳೆಯೂ ಲಸಿಕೆ ಹಾಕಿಸಿಕೊಳ್ಳದ ಜನರ ಪಟ್ಟಿಯನ್ನು ಮಾಡಲಾಗುವುದು. ಇದರೊಂದಿಗೆ ನಗರದಲ್ಲಿ ಅರ್ಹ ಜನಸಂಖ್ಯೆಗೆ ಆದಷ್ಟು ಬೇಗ ಲಸಿಕೆ ಹಾಕಲು ಸಹಾಯಕವಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು.







