ಮಂಗಳೂರು,ಅ.18: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈದ್ ಮಿಲಾದ್ ಅನ್ನು ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಜಿಲ್ಲೆಯಾದ್ಯಂತ ಆಚರಿಸಲಿರುವ ಈದ್ ಮಿಲಾದ್ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ.
- ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ ಸಾಂಸ್ಕೃತಿಕ ಕಾರ್ಯಕ್ರಮ/ ಸಭೆ/ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ.
- ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು.
- ಒಂದು ವೇಳೆ ಹೆಚ್ಚು ಜನ ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಬಹುದು .
- ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ.
- ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು.
- 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಆಚರಿಸಬಹುದಾಗಿದೆ.
- ಮಸೀದಿಗಳಲ್ಲಿ ನಮಾಝ್ ನಿರ್ವಹಿಸುವವರ ಮಧ್ಯ ಕನಿಷ್ಠ ಆರು ಅಡಿ ಅಂತರ ಇರಬೇಕು.
- ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡಬೇಕು.
- ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು.
- ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.
ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್ ನಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್