ನವದೆಹಲಿ,ಅ.19: ಪ್ರವಾದಿ ಮುಹಮ್ಮದ್ ಪೈಗಂಬರ್ ಸ್ವಲ್ಲಲ್ಲಾಹು ಅಲೈಹಿ ವ ಸಲ್ಲಮ್ ಅವರ ಜನ್ಮದಿನವಾದ ಈದ್ -ಮಿಲಾದ್ನ್ನು ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಮಂಗಳವಾರ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈಗ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ. ನಾವು ಪ್ರವಾದಿಯ ಜೀವನ ಮತ್ತು ಆದರ್ಶಗಳಿಂದ ಸ್ಫೂರ್ತಿ ಪಡೆಯೋಣ ಮತ್ತು ಸಮಾಜದ ಏಳಿಗೆ ಮತ್ತು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ದುಡಿಯೋಣ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು, ಈ ಹಬ್ಬ ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ತರಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಮೇಲುಗೈ ಸಾಧಿಸಲಿ. ಈದ್ ಮುಬಾರಕ್! ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್