ಕಲ್ಲಿಕೋಟೆ :ಕೋಝಿಕ್ಕೋಡ್, ಇಂಙಪುಝ ಎಲೋಕ್ಕರ ನಿವಾಸಿ ಸಿರಾಜ್ ಸೌದಿಯಿಂದ ನೇರವಾಗಿ, ಎಪಿ ಉಸ್ತಾದರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಲು ಕಾರಂದೂರು ಮರ್ಕಝ್ ಗೆ ಆಗಮಿಸಿದರು.
ಐದು ವರ್ಷಗಳ ಹಿಂದೆ ನಡೆದ ಕಾರು ಅಪಘಾತದಲ್ಲಿ ಸಿರಾಜ್ ಅವರ ಜೀವನವೇ ಬುಡಮೇಲಾಯಿತು. ಸೌದಿ ಅರೇಬಿಯಾದ ತಾಯಿಫ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಿರಾಜ್ ಅವರು ಓಡಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಇಬ್ಬರು ಸೌದಿ ಪ್ರಜೆಗಳು ಮರಣಹೊಂದಿದ್ದರು.ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸಿರಾಜ್ ಅವರ ಬಿಡುಗಡೆಗೆ ಮೃತರ ಸಂಬಂಧಿಕರಿಗೆ 75 ಲಕ್ಷ ರೂಪಾಯಿ(ಬ್ಲಡ್ ಮನಿ) ನೀಡುವಂತೆ ಸೌದಿ ನ್ಯಾಯಾಲಯ ಆದೇಶಿಸಿದೆ.
ಕ್ಯಾನ್ಸರ್ ಪೀಡಿತ ತಂದೆ ಮತ್ತು ತಾಯಿ, ಪತ್ನಿ ಹಾಗೂ ಪುಟ್ಟ ಹೆಣ್ಣುಮಗುವನ್ನು ಹೊಂದಿರುವ ಕುಟುಂಬದ ಮನೆಯನ್ನು ಮಾರಾಟ ಮಾಡಿದರೂ ಈ ಬೃಹತ್ ಮೊತ್ತವನ್ನು ಕಂಡುಹಿಡಿಯುವುದು ಅಸಾಧ್ಯವಾಗಿತ್ತು. ಈ ನಿಟ್ಟಿನಲ್ಲಿ ಕುಟುಂಬವು ಕೇರಳ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರೊಂದಿಗೆ ತಿಳಿಸಿದ್ದು, ಅವರ ಸೂಚನೆಯಂತೆ ಐಸಿಎಫ್ ಸೌದಿ ಸಮಿತಿಯು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ.
ಈ ಮೊತ್ತವನ್ನು ಕಡಿತಗೊಳಿಸುವಂತೆ ಸಮಿತಿಯು ನ್ಯಾಯಾಲಯಕ್ಕೆ ಮನವಿ ಮಾಡಿತು ಮತ್ತು ಮೃತರ ಸಂಬಂಧಿಕರನ್ನು ಸಂಪರ್ಕಿಸಿತು. ಇದರ ಪರಿಣಾಮ ಮೃತರ ವಾರಸುದಾರರು 33 ಲಕ್ಷ ರೂ. ಪಾವತಿಸುವಂತೆ ತಿಳಿಸಿದರು. ಸಿರಾಜ್ ಅವರ ಸಂಬಂಧಿಕರಿಗೆ ಈ ಮೊತ್ತವನ್ನೂ ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ,ಐಸಿಎಫ್ ಸೌದಿ ರಾಷ್ಟ್ರೀಯ ಸಮಿತಿಯು ಸಿರಾಜ್ ಬಿಡುಗಡೆಗಾಗಿ ಹಣವನ್ನು ಸಂಗ್ರಹಿಸಿತು.
ಕಳೆದ ದಿನ ಸಿರಾಜ್ ಬಿಡುಗಡೆಗೊಂಡಿದ್ದು, ಊರಿಗೆ ತೆರಳಿ ತನ್ನ ಮನೆಗೆ ತೆರಳುವ ಮುಂಚಿತವಾಗಿ ತನ್ನ ಬಿಡುಗಡೆಗೆ ಕಾರಣಕರ್ತರಾದ ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ. ಪಿ. ಉಸ್ತಾದರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಕೇರಳ ಮುಸ್ಲಿಂ ಜಮಾಅತ್ ಮತ್ತು ಐಸಿಎಫ್ ಸೌದಿ ರಾಷ್ಟ್ರೀಯ ಸಮಿತಿಗೆ ಧನ್ಯವಾದಗಳನ್ನು ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)