ನವದೆಹಲಿ, ಅ.28- ಎನ್ಇಇಟಿ ಫಲಿತಾಂಶವನ್ನು ಪ್ರಕಟಿಸಲು ಅನುಮತಿ ನೀಡುವ ಮೂಲಕ ದೇಶಾದ್ಯಂತ ವೈದ್ಯಕೀಯ ಪದವಿ ಪ್ರವೇಶಕ್ಕಿದ್ದ ಪ್ರಮುಖ ಅಡ್ಡಿಯನ್ನು ಸುಪ್ರೀಂಕೋರ್ಟ್ ನಿವಾರಿಸಿದೆ. 2021-22ನೇ ಸಾಲಿನ ವೈದ್ಯಕೀಯ ಪದವಿ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕಳೆದ ಸೆಪ್ಟಂಬರ್ 12ರಂದು ದೇಶಾದ್ಯಂತ ರಾಷ್ಟ್ರೀಯ ಸಾಮಾನ್ಯ ಅರ್ಹತಾ ಪರೀಕ್ಷೆ (ಎನ್ಇಇಟಿ) ನಡೆಸಿತ್ತು.
202 ನಗರಗಳ 3,682 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 16,14,777 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. 9,588 ಕೇಂದ್ರ ಅಧಿಕ್ಷಕರು, ಉಪ ಅಧಿಕ್ಷಕರು, 5615 ವೀಕ್ಷಕರು ಕೆಲಸ ಮಾಡಿದ್ದರು. 220 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನದಲ್ಲಿ 2,69,378 ಮೌಲ್ಯಮಾಪಕರು ಭಾಗವಹಿಸಿದ್ದರು.
ಪರೀಕ್ಷೆಯ ದಿನದಂದು ಮಹಾರಾಷ್ಟ್ರದ ಕೇಂದ್ರವೊಂದರಲ್ಲಿ ವೈಷ್ಣವಿ ಭೂಪಾಲಿ ಮತ್ತು ಅಭಿಶೇಕ್ ಶಿವಾಜಿ ಎಂಬ ಇಬ್ಬರು ವಿದ್ಯಾರ್ಥಿಗಳ ಒಎಂಆರ್ ಹಾಳೆ ಮತ್ತು ಬುಕ್ಲೆಟ್ ಅದಲು ಬದಲಾಗಿದ್ದವು. ಈ ವಿದ್ಯಾರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಫಲಿತಾಂಶ ಪ್ರಕಟಿಸಲು ತಡೆಯಾಜ್ಞೆ ನೀಡಿದ್ದಲ್ಲದೆ, ಹೊಸದಾಗಿ ಪರೀಕ್ಷೆ ನಡೆಸುವಂತೆ ಅಕ್ಟೋಬರ್ 20ರಂದು ಆದೇಶಿಸಿತ್ತು.
ಹೈಕೋರ್ಟ್ನ ಆದೇಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು. ಸುಪ್ರೀಂಕೋರ್ಟ್ ಎಲ್.ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿ.ಆರ್.ಗಾವಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಬಾಂಬೆ ಹೈಕೋರ್ಟ್ನ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಪರೀಕ್ಷಾ ಸಂಸ್ಥೆ ಎನ್ಇಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಸೂಚಿಸಿದೆ.
ತಕರಾರು ಅರ್ಜಿ ಸಲ್ಲಿಸಿರುವ ಇಬ್ಬರು ವಿದ್ಯಾರ್ಥಿಗಳ ಕುರಿತಂತೆ ದೀಪಾವಳಿ ರಜೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಸುಪ್ರೀಕೋರ್ಟ್ ತಿಳಿಸಿದೆ. ಆದಾಗ್ಯೂ ನೋಟಿಸ್ ನೀಡಿ ಕೌಂಟರ್ ದಾಖಲಿಸಲು ಅನುಮತಿ ನೀಡಲಾಗುವುದು. ಇಬ್ಬರು ವಿದ್ಯಾರ್ಥಿಗಳಿಗಾಗಿ 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ. ಈ ಮೊಲಕ ನೆನೆಗುದಿಗೆ ಬಿದ್ದಿದ್ದ ವೈದ್ಯಕೀಯ ಪದವಿ ಪ್ರವೇಶ ಪ್ರಕ್ರಿಯೆಗಳಿಗೆ ಚಾಲನೆ ಸಿಕ್ಕಂತಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ