ನವದೆಹಲಿ: ‘ವ್ಯಾಪಾರದಲ್ಲಿ ನಷ್ಟವಾಗುವುದು ಸಹಜ. ಆದರೆ, ಮೋಸ ಮಾಡುವ ಉದ್ದೇಶದಿಂದ ಬ್ಯಾಂಕ್ ಸಾಲ ಪಡೆದು ನಷ್ಟ ಉಂಟು ಮಾಡುವುದರಿಂದ ಭಾರತೀಯ ಕುಟುಂಬಗಳು ತೊಂದರೆಗೊಳಗಾಗುತ್ತಿವೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದರು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಕೋವಿಂದ್ ಈ ಬಗ್ಗೆ ಮಾತನಾಡಿದ್ದಾರೆ. ದೊಡ್ಡ ಮೊತ್ತದ ಹಣ ಪಾವತಿಯಾಗದೇ ಇದ್ದಾಗ ಅಮಾಯಕ ಜನರಿಗೆ ತೊಂದರೆಯಾಗುತ್ತದೆ. ಅಂತಿಮವಾಗಿ ಪ್ರಾಮಾಣಿಕ ತೆರಿಗೆದಾರರು ನಷ್ಟವನ್ನು ಭರಿಸಬೇಕಾಗುತ್ತದೆ ಎಂದರು.
‘ಗ್ರಾಮೀಣ ಪ್ರದೇಶದ ದುರ್ಬಲರು ಮತ್ತು ಕೆಳ ಸಮುದಾಯದವರು, ಸಣ್ಣಪುಟ್ಟ ಉದ್ಯಮಿಗಳು ತಮ್ಮ ಸಾಲ ಮರು ಪಾವತಿಸಲು ಪ್ರಯತ್ನಿಸುತ್ತಿದ್ದಾರೆ. ಇವರು ಹೆಚ್ಚು ಶ್ರಮಪಡುವ ಭಾರತೀಯರು, ಹೆಚ್ಚಿನವರು ಮಹಿಳೆಯರು. ಸಣ್ಣ ಮೊತ್ತದ ಸಾಲಗಳನ್ನು ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಅವರು ತಮ್ಮ ಕನಸುಗಳನ್ನು ಕಟ್ಟುತ್ತಿದ್ದಾರೆ. ಜೊತೆಗೆ ನಮ್ಮ ಭಾರತದ ಕನಸನ್ನೂ ಕಾಣುತ್ತಿದ್ದಾರೆ’ ಎಂದು ಹೇಳಿದರು.
ಕೋವಿಂದ್ ಅವರು ಎಫ್ಐಸಿಸಿಐ ಮಹಿಳಾ ಸಂಘಟನೆಯ 34ನೇ ವಾರ್ಷಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾನ್ಯ ನಾಗರಿಕರು, ಅದರಲ್ಲಿಯೂ ಮಹಿಳೆಯರಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ