ರಿಯಾದ್ – ಮುಖ್ಯರಸ್ತೆಯಲ್ಲಿ 20 ಮೀಟರ್ ಗಿಂತ ಹೆಚ್ಚು ವಾಹನಗಳನ್ನು ಹಿಂದಕ್ಕೆ ಚಲಾಯಿಸಿ, ಸಂಚಾರ ನಿಯಮ ಉಲ್ಲಂಘಿಸಿದರೆ 150 ರಿಯಾಲ್ ನಿಂದ 300 ರಿಯಾಲ್ ವರೆಗೆ ದಂಡ ವಿಧಿಸಲಾಗುವುದು ಎಂದು ಸಂಚಾರ ನಿರ್ದೇಶನಾಲಯ ಎಚ್ಚರಿಕೆ ನೀಡಿದೆ.
ಸುರಕ್ಷಿತ ಮತ್ತು ಕಾನೂನುಬದ್ಧ ರೀತಿಯಲ್ಲಿ ರಸ್ತೆಯಿಂದ ನಿರ್ಗಮಿಸಲು ಸಾಧ್ಯವಾಗದಿದ್ದರೆ, ಮುಂದಿನ ಎಕ್ಸಿಟ್ ತನಕ ವಾಹನವನ್ನು ಚಲಾಯಿಸಬೇಕು.ರಸ್ತೆಯಲ್ಲಿನ ಸುಗಮ ಸಂಚಾರಕ್ಕೆ ಅಡ್ಡಿ ಮಾಡಬಾರದು.
ಪ್ರಯಾಣಿಸುವ ವೇಳೆ ಅನಿರೀಕ್ಷಿತವಾಗಿ ಟೈರ್ ಒಡೆದುಹೋದ ಸಂದರ್ಭದಲ್ಲಿ ತಮ್ಮ ಮತ್ತು ರಸ್ತೆ ಬಳಸುವ ಇತರರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಚಾರ ನಿರ್ದೇಶನಾಲಯವು ಚಾಲಕರನ್ನು ಎಚ್ಚರಿಸಿದೆ.
ತಮ್ಮ ವಾಹನದ ಟೈರ್ ಅನಿರೀಕ್ಷಿತವಾಗಿ ಸ್ಫೋಟಗೊಂಡರೆ ಚಾಲಕರು ಪಾಲಿಸಬೇಕಾದ ಏಳು ಹಂತಗಳು
- ಸ್ಟೀರಿಂಗ್ ಚಕ್ರವನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.
- ಬ್ರೇಕ್ ಹಾಕಬಾರದು.
- ಎಕ್ಸಲರೇಟರ್ ನಿಂದ ಪಾದವನ್ನು ಎತ್ತಬೇಕು.
- ರಸ್ತೆಯ ಬಲಭಾಗದಲ್ಲಿ ಯಾರೂ ಇಲ್ಲವೆಂದು ಖಾತರಿಪಡಿಸಬೇಕು.
- ನಂತರ ವಾಹನವನ್ನು ರಸ್ತೆ ಬದಿಗೆ ಚಲಾಯಿಸ ಬೇಕು.
- ವಾಹನವನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಲು ವಿಶೇಷ ಕಾಳಜಿ ವಹಿಸಬೇಕು.
- ವಾಹನದ ಎಮರ್ಜೆನ್ಸಿ ಸಿಗ್ನಲ್ ವರ್ತಿಸಬೇಕು.
ಎಂದು ಸಂಚಾರ ನಿರ್ದೇಶನಾಲಯ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ