ಕೊಚ್ಚಿ : ತನ್ನ ರೆಸ್ಟೋರೆಂಟ್ ಮುಂದೆ ‘ಹಲಾಲ್ ನಿಷಿದ್ಧ’ ಎಂಬ ಬೋರ್ಡ್ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ತುಷಾರ ಮತ್ತು ಅವರ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ನ. 2 ರಂದು ಇಬ್ಬರನ್ನು ಬಂಧಿಸಲಾಗಿದೆ ಎಂದು ಎರ್ನಾಕುಲಂ ನಗರ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರೆಸ್ಟೋರೆಂಟ್ ಮಾಲಿಕತ್ವದ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ತುಷಾರ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಪರಾರಿಯಾಗಿದ್ದ ತುಷಾರ, ಆಕೆಯ ಪತಿ ಅಜಿತ್ ಮತ್ತು ಆಕೆಯ ಸಹೋದ್ಯೋಗಿ ಅಪ್ಪು ಎಂಬುವವರನ್ನು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ ಎಚ್ ನಾಗರಾಜು ಮಂಗಳವಾರ ಖಚಿತಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಆಕೆಯ ಇಬ್ಬರು ಸಹಚರರಾದ ಅಬಿನ್ ಬೆನ್ಸಸ್ ಆಂಟೋನಿ (22) ಮತ್ತು ವಿಷ್ಣು ಶಿವದಾಸ್ (26) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದರು.
ತುಷಾರ ತನ್ನ ಎಫ್ಬಿ ಪೋಸ್ಟ್ನಲ್ಲಿ ಹಲಾಲ್ ಅಲ್ಲದ ಆಹಾರವನ್ನು ನೀಡಿದ್ದಕ್ಕಾಗಿ ಜಿಹಾದಿಗಳು ತನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ಸುಳ್ಳು ಆರೋಪವನ್ನು ಪ್ರಚಾರ ಪಡಿಸಿ ಕೋಮುದ್ವೇಷ ಹರಡಲು ಯತ್ನಿಸಿದ್ದರು. ಇದನ್ನು ಕೆಲವು ಸಂಘ ಪರಿವಾರದ ಗುಂಪುಗಳು ಕೈಗೆತ್ತಿಕೊಂಡು ಪ್ರಚಾರ ಪಡಿಸಿದ್ದರು.ಕೇರಳದ ಕೊಚ್ಚಿಯಲ್ಲಿ ಹಲಾಲ್ ಮಾಡದ ಆಹಾರ ಪೂರೈಸುವ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಲು ಪ್ರಯತ್ನಿಸಿದ ತುಷರಾ ಅಜಿತ್ ಅವರ ಮೇಲೆ ಮುಸ್ಲಿಂ ಸಮುದಾಯದವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕೆಲವು ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
ವರದಿಗಳ ಪ್ರಕಾರ ಧಾರ್ಮಿಕ ಕಾರಣಗಳಿಂದ ಯಾವುದೇ ಘರ್ಷಣೆ ನಡೆದಿಲ್ಲ. ಯಾವುದೋ ವಿಷಯವಾಗಿ ವಾದ ವಿವಾದಗಳು ನಡೆದಿದ್ದು ಹೋರಾಟ ಭುಗಿಲೆದ್ದಿದೆ. ಈ ಜಗಳದಲ್ಲಿ ಭಾಗಿಯಾದವರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಯಾರು ಇಲ್ಲ ಎನ್ನಲಾಗಿದೆ.
ಅಲ್ಲದೇ, ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷ ಹರಡಿದ ಆರೋದಪ ಮೇಲೆ ತುಷಾರ ವಿರುದ್ಧ ಇನ್ಫೋಪಾರ್ಕ್ ಪೊಲೀಸರು ಭಾನುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಷಾರ ಅಜಿತ್ ಕಲ್ಲಾಯಿಲ್ ಎಂಬುವವರ ಫೇಸ್ಬುಕ್ ಖಾತೆಯಲ್ಲಿ ‘ಕೋಮು ದ್ವೇಷವನ್ನು ಕೆರಳಿಸುವ ಉದ್ದೇಶದಿಂದ ವೀಡಿಯೋ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಪರ್ಯಾಸವೆಂದರೆ, ಈಗಲೂ ಕೆಲವೊಂದು ಸಂಘಪರಿವಾರ ಸಂಘಟನೆಯ ನಾಯಕರು ಈ ನಕಲಿ ವಾರ್ತೆಯನ್ನು ಹಂಚಿ ತಮ್ಮ ವಿಕೃತಿ ಮೆರೆಯುತ್ತಿದ್ದಾರೆ ಎಂಬುದಕ್ಕೆ ಈ ಕೆಳಗಿನ ಟ್ವಿಟರ್ ಪೋಸ್ಟ್ ಸಾಕ್ಷಿ.

















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ