ಮುಂಬೈ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ಕ್ರಮವಾಗಿ 5, ಮತ್ತು 10 ರೂ.ನಷ್ಟು ಕೇಂದ್ರ ಸರ್ಕಾರ ಕಡಿತ ಮಾಡಿದ ಬೆನ್ನಲ್ಲೇ, ಗುರುವಾರ ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಇಂಧನ ಬೆಲೆಯನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ಬೆಲೆ 100ರೂ. ಗೆ ಏರದಂತೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು. ದೇಶದಲ್ಲಿ ಕೆಲ ದಿನಗಳಿಂದ ಪೆಟ್ರೋಲ್ ಬೆಲೆ ರೂ.100 ಗಿಂತ ಅಧಿಕವಾಗಿದೆ. ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿರುವುದರಿಂದ ಯಾವುದೇ ಉದ್ದೇಶ ಸಾಧಿಸಿದಂತಲ್ಲ, ಅದನ್ನು ಕನಿಷ್ಠ 25ಕ್ಕೆ ರೂ.ಗೆ ತದನಂತರ 50 ರೂ.ಗೆ ಇಳಿಸಬೇಕು ಎಂದು ರಾವತ್ ಹೇಳಿದರು.
ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿದೆ. ಇದನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದರು.ಜನರು ಸಾಲ ಪಡೆದು ದೀಪಾವಳಿ ಆಚರಿಸಬೇಕಾಗಿದೆ. ಹಣದುಬ್ಬರ ಕಾರಣದಿಂದ ಹಬ್ಬದ ವಾತವಾರಣ ಇಲ್ಲದಂತಾಗಿದೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಸಂಜಯ್ ರಾವತ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ