ಮುಂಬೈ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ಕ್ರಮವಾಗಿ 5, ಮತ್ತು 10 ರೂ.ನಷ್ಟು ಕೇಂದ್ರ ಸರ್ಕಾರ ಕಡಿತ ಮಾಡಿದ ಬೆನ್ನಲ್ಲೇ, ಗುರುವಾರ ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಇಂಧನ ಬೆಲೆಯನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ಬೆಲೆ 100ರೂ. ಗೆ ಏರದಂತೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು. ದೇಶದಲ್ಲಿ ಕೆಲ ದಿನಗಳಿಂದ ಪೆಟ್ರೋಲ್ ಬೆಲೆ ರೂ.100 ಗಿಂತ ಅಧಿಕವಾಗಿದೆ. ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿರುವುದರಿಂದ ಯಾವುದೇ ಉದ್ದೇಶ ಸಾಧಿಸಿದಂತಲ್ಲ, ಅದನ್ನು ಕನಿಷ್ಠ 25ಕ್ಕೆ ರೂ.ಗೆ ತದನಂತರ 50 ರೂ.ಗೆ ಇಳಿಸಬೇಕು ಎಂದು ರಾವತ್ ಹೇಳಿದರು.
ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿದೆ. ಇದನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದರು.ಜನರು ಸಾಲ ಪಡೆದು ದೀಪಾವಳಿ ಆಚರಿಸಬೇಕಾಗಿದೆ. ಹಣದುಬ್ಬರ ಕಾರಣದಿಂದ ಹಬ್ಬದ ವಾತವಾರಣ ಇಲ್ಲದಂತಾಗಿದೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಸಂಜಯ್ ರಾವತ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ