ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ (ಎಲ್ಪಿಜಿ) ಬೆಲೆ ಏರಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕಿಡಿಕಾರಿದ್ದಾರೆ.
ಸರಕಾರದ ಅಭಿವೃದ್ಧಿಯ ಮಾತುಗಳು ಬಹಳ ದೂರವಿದ್ದು, ಲಕ್ಷಾಂತರ ಕುಟುಂಬಗಳು ಇಂದು ಮತ್ತೆ ಕಟ್ಟಿಗೆ ಒಲೆ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಟ್ಟೀಟ್ನಲ್ಲಿ ಹರಿಹಾಯ್ದಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಗಾಡಿ ರಿವರ್ಸ್ ಗೇರ್ನಲ್ಲಿದೆ” ಎಂದು ರಾಹುಲ್ ಗಾಂಧಿ ಅವರು ವ್ಯಂಗ್ಯವಾಡಿದ್ದು, “ಅಭಿವೃದ್ಧಿಯ ಮಾತುಗಳು ಮೈಲುಗಟ್ಟಲೆ ದೂರವಿದೆ. ಲಕ್ಷಾಂತರ ಕುಟುಂಬಗಳು ಕಟ್ಟಿಗೆ ಒಲೆ ಉರಿಸುವ ಪರಿಸ್ಥಿತಿ ಬಂದಿದೆ,” ಎಂದಿದ್ದಾರೆ.
ಹಿಂದಿ ಭಾಷೆಯಲ್ಲಿ ಟ್ಟೀಟ್ ಮಾಡಿರುವ ಅವರು, “ಮೋದಿಯವರ ಅಭಿವೃದ್ಧಿಯ ವಾಹನ ರಿವರ್ಸ್ ಗೇರ್ನಲ್ಲಿದೆ ಮತ್ತು ಅದರ ಬ್ರೇಕ್ ಕೂಡ ವಿಫಲವಾಗಿದೆ,” ಎಂದು ಲೇವಡಿ ಮಾಡಿದ್ದಾರೆ. ಪ್ರೈಸ್ಹೈಕ್ (ಬೆಲೆ ಏರಿಕೆ) ಹ್ಯಾಷ್ಟ್ಯಾಗ್ ಹಾಕಿ ಅವರು ಈ ಟ್ಟೀಟ್ ಮಾಡಿದ್ದಾರೆ.
ವರದಿಯೊಂದರ ತುಣುಕನ್ನೂ ಟ್ಟೀಟ್ನಲ್ಲಿ ರಾಹುಲ್ ಗಾಂಧಿ ಲಗತ್ತಿಸಿದ್ದಾರೆ.
‘ಸಮೀಕ್ಷೆಯೊಂದರ ಪ್ರಕಾರ ದೇಶದ ಗ್ರಾಮೀಣ ಭಾಗದಲ್ಲಿ ಆಹಾರ ಬೇಯಿಸಲು ಶೇ. 42ರಷ್ಟು ಜನರು ಎಲ್ಪಿಜಿ ಸಿಲಿಂಡರ್ಗಳನ್ನು ಬಳಸುವುದನ್ನು ನಿಲ್ಲಿಸಿದ್ದಾರೆ. ಕಾರಣ ಅವರಿಗೆ ಸಿಲಿಂಡರ್ನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮತ್ತೆ ಇವರುಗಳು ಕಟ್ಟಿಗೆ ಒಲೆಗೆ ಮರಳಿದ್ದಾರೆ” ಎಂದು ಈ ವರದಿಯು ಹೇಳುತ್ತಿದೆ.
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಹಣದುಬ್ಬರ ಮತ್ತು ಬೆಲೆ ಏರಿಕೆ ಸಂಬಂಧ ನಿರಂತರವಾಗಿ ಕೇಂದ್ರ ಸರಕಾರವನ್ನು ಟೀಕಿಸುತ್ತಲೇ ಬಂದಿದೆ.ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಹಾಗೂ ಅಡುಗೆ ಅನಿಲ ಸಿಲಿಂಡರ್ ದರ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ.
ಇತ್ತೀಚೆಗೆ ದೀಪಾವಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತು ಕೆಲವು ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸ್ವಲ್ಪ ಮಟ್ಟಿಗೆ ಕಡಿತಗೊಳಿಸಿದ್ದು, ಬೆಲೆ ಏರಿಕೆಯಿಂದ ಬಳಲುತ್ತಿದ್ದ ಜನರಿಗೆ ಅಲ್ಪ ಪ್ರಮಾಣದ ರಿಲೀಫ್ ನೀಡಿವೆ. ಆದರೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಮಾತ್ರ ಕೇಂದ್ರ ಸರಕಾರ ಇನ್ನೂ ಇಳಿಕೆ ಮಾಡಿಲ್ಲ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ