ಬೆಂಗಳೂರು: ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದಾರೆಂದು ಚಿ.ನಾ ರಾಮು ಆರೋಪಿಸಿದ್ದಾರೆ.
ಖುದ್ದು ಬಿಜೆಪಿ ಎಸ್ಸಿ ಮೋರ್ಚಾ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಚಿ.ನಾ ರಾಮು ಈ ಬಗ್ಗೆ ಪ್ರತಿಕ್ರಿಯಿಸಿ, ಛಲವಾದಿ ನಾರಾಯಣಸ್ವಾಮಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ಎಲ್ಲವನ್ನೂ ಜಾಣತನದಿಂದ ಮುಚ್ಚಿಟ್ಟು ಬಿಜೆಪಿಗೆ ನುಗ್ಗಿ ನಾಯಕರನ್ನು ವಂಚಿಸಿ, ದಿಕ್ಕುತಪ್ಪಿಸಿ ಅವರಿಗೆ ಸಂಬಂಧಪಡದ ಎಸ್ಸಿ ಮೋರ್ಚಾ ಸೇರಿದ್ದಾರೆ. ಗುಟ್ಟಾಗಿ ಪ್ರತಿ ಭಾನುವಾರ ಚರ್ಚ್ ಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ. ಅವರು ಕ್ರೈಸ್ತ ಮಹಿಳೆಯನ್ನು ಮದುವೆಯಾದ ಬಳಿಕ ಮತಾಂತರವಾಗಿದ್ದಾರೆ.
ಅವರ ಮಕ್ಕಳಿಗೂ ಅದೇ ಧರ್ಮದಲ್ಲಿ ಹೆಣ್ಣು ತಂದು ಇಡೀ ಕುಟುಂಬವೇ ಕ್ರೈಸ್ತ ಧರ್ಮವನ್ನು ಶ್ರದ್ಧೆಯಿಂದ ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ‘ಇದು ನಿಜಕ್ಕೂ ಸೋಜಿಗ ಮತ್ತು ಕಳವಳ ಹುಟ್ಟಿಸುವ ವಿಷಯವಾಗಿದೆ. ನಾಜೂಕಾಗಿ ಇವರು ಮಾಡಿದ ಈ ಕೃತ್ಯ ದಿಗ್ಭ್ರಮೆಯ ಜೊತೆಗೆ ಪ್ರತಿ ಬಿಜೆಪಿ ಕಾರ್ಯಕರ್ತರಲ್ಲೂ ಆಕ್ರೋಶ ಉಂಟು ಮಾಡುವ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಸಹೋದರ ಛಲವಾದಿ ನಾರಾಯಣಸ್ವಾಮಿ ಅವರು ಮೂಲ ಕ್ರೈಸ್ತ ಮತಾನುಯಾಯಿ ಆಗಿದ್ದರೆ ನಮ್ಮ ಆಕ್ಷೇಪವಿರಲಿಲ್ಲ. ಆದರೆ ಹಿಂದೂ ಧರ್ಮದಿಂದ ಮತಾಂತರಗೊಂಡು, ತಮ್ಮ ಕುಟುಂಬವನ್ನೂ ಮತ ಪರಿವರ್ತನೆ ಮಾಡಿ ಅದನ್ನು ಮುಚ್ಚಿಕೊಂಡಿದ್ದರೆ ಅದರ ಬಗ್ಗೆ ನಮ್ಮ ವಿರೋಧವಿದೆ. ಹಿಂದೂ ಧರ್ಮದಿಂದ ಅನ್ಯ ಧರ್ಮಕ್ಕೆ ಮತಾಂತರ ಹೊಂದುವುದನ್ನು ಪ್ರತಿ ಬಿಜೆಪಿ ಕಾರ್ಯಕರ್ತ, ಪ್ರತಿ ಧರ್ಮನಿಷ್ಠ ಹಿಂದೂವು ವಿರೋಧಿಸುತ್ತಾನೆ. ನಮ್ಮ ಧರ್ಮ ವಿಶ್ವಕ್ಕೆ ಬೆಳಕು ತೋರಿದ, ಮನುಕುಲದ ಪರಂಪರೆಗೇ ಮಾದರಿಯಾದ ಧರ್ಮವಾಗಿದೆ.
ಹೀಗಿರುವಾಗ ಛಲವಾದಿ ನಾರಾಯಣಸ್ವಾಮಿ ಅವರು ಕದ್ದುಮುಚ್ಚಿ ಕ್ರೈಸ್ತ ಧರ್ಮ ಪಾಲನೆ ಮಾಡುತ್ತಿದ್ದಾರೆ ಎಂಬುದೇ ಸತ್ಯವೇ ಆಗಿದ್ದರೆ. ಅವರು ಕೂಡಲೇ “ಘರ್ ವಾಪಸಿ” ಆಗಬೇಕು. ಅಥವಾ ತಮ್ಮ ತಪ್ಪು, ಪಕ್ಷಕ್ಕೆ ಮಾಡಿದ ದ್ರೋಹ ಒಪ್ಪಿಕೊಂಡು ಎಲ್ಲಾ ನಮ್ಮ ಬಿಜೆಪಿ ನಾಯಕರ ಕ್ಷಮೆ ಕೇಳಿ ಎಲ್ಲರೂ ಕ್ಷಮಿಸಿದರೆ ಆಗ ಅಲ್ಪಸಂಖ್ಯಾತ ಮೋರ್ಚಾ ಸೇರಿಕೊಳ್ಳಬೇಕು. ಇಲ್ಲಾ ನಾನು ಹಿಂದೂ ಧರ್ಮೀಯನೇ ಎಂಬುದಾದರೆ ನಮ್ಮ ರಾಜ್ಯ ಕಚೇರಿ ಬಳಿಯೇ ಇರುವ ಗಂಗಮ್ಮನ ದೇಗುಲ, ಸಮೀಪದಲ್ಲೇ ಇರುವ ಸರ್ಕಲ್ ಮಾರಮ್ಮನ ದೇವಸ್ಥಾನ ಮತ್ತು ಅಣ್ಣಮ್ಮನ ದೇವಸ್ಥಾನಕ್ಕೆ ತಮ್ಮ ಕುಟುಂಬದೊಂದಿಗೆ ಬಂದು ಪೂಜೆ ಸಲ್ಲಿಸಿ ಹಿಂದೂ ಧರ್ಮದ ಬಗ್ಗೆ ಇರುವ ಶ್ರದ್ಧೆಯನ್ನು ವ್ಯಕ್ತಪಡಿಸಬೇಕು ಎಂದಿದ್ದಾರೆ.
ನಮ್ಮ ಕುಟುಂಬ ಕ್ರೈಸ್ತ ಧರ್ಮ ಅನುಸರಿಸುತ್ತಿದೆ ನಾನು ಹಿಂದೂ ಅನ್ನುವುದಾದರೆ ಕೂಡಲೇ ಇಡೀ ಕುಟುಂಬದ “ಘರ್ ವಾಪಸಿ” ಮೂಲಕ ಬಿಜೆಪಿ ಪಕ್ಷ, ನಮ್ಮ ಪಕ್ಷದ ತತ್ವ ಸಿದ್ದಾಂತ ಪಾಲನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು