ನವದೆಹಲಿ,ನ.8: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು.

ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳು ಉಪಸ್ಥಿತರಿದ್ದರು.
ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ಮುಂಬಯಿ ಮೂಲಕ ದೇಶದ ರಾಜಧಾನಿ ತಲುಪಿದ್ದರು. ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು. ಇದೀಗ ರಾಷ್ಟ್ರಪತಿಭವನಕ್ಕೂ ಅದೇ ರೀತಿಯ ಮಾಸಿದ ಬಿಳಿ ಪಂಚೆ ಮತ್ತೆ ಬಿಳಿ ಶರ್ಟ್ ತೊಟ್ಟು ಕೈಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಿಡಿದುಕೊಂಡು ತೆರಳಿದ್ದರು.
ಕಿತ್ತಳೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರುವಾಸಿಯಾಗಿದ್ದಾರೆ. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.


















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ