ಮನಾಮ: ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ, ಮುಸ್ಲಿಮರ ವಿರುದ್ಧ ಸಂಘಪರಿವಾರ ನಡೆಸುತ್ತಿರುವ ವ್ಯವಸ್ಥಿತ ಹಿಂಸಾಚಾರ ಮತ್ತು ಹತ್ಯೆಯನ್ನು ಬಹ್ರೇನ್ ತೀವ್ರವಾಗಿ ಖಂಡಿಸಿದೆ.
ಭಾರತವು, ಹಿಂಸಾಚಾರಗಳಿಗೆ ಕಡಿವಾಣ ಹಾಕದಿದ್ದರೆ ಭಾರತದೊಂದಿಗಿನ ವ್ಯಾಪಾರ ವಹಿವಾಟುಗಳನ್ನು ಬಹಿಷ್ಕರಿಸುವುದರೊಂದಿಗೆ ಭಾರತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಹ್ರೈನ್ ಮಂತ್ರಿಮಂಡಲದ ಶಾಸಕ ಅಬ್ದುಲ್ ರಝಾಕ್ ಹತ್ತಾಬ್ ಅವರು ಎಚ್ಚರಿಸಿದ್ದಾರೆ.
ಅವರು ಇತ್ತೀಚೆಗೆ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ, ಅಸ್ಸಾಂ ಮತ್ತು ಕಾಶ್ಮೀರದಲ್ಲಿ ಮುಸ್ಲಿಮರು ವ್ಯಾಪಕ ಹಿಂಸಾಚಾರ, ನಿಂದನೆ ಮತ್ತು ವ್ಯವಸ್ಥಿತ ಹತ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಮುಸ್ಲಿಮರ ಸ್ವಾತಂತ್ರ್ಯ, ಹಕ್ಕು ಹಾಗೂ ಧಾರ್ಮಿಕ ಆಚರಣೆಗಳನ್ನೂ ತಡೆಯಲಾಗುತ್ತಿದೆ ಎಂದರು.
ಭಾರತದ ಈ ನಡೆ ಅಂತರಾಷ್ಟ್ರೀಯ ಕಾನೂನು ಮತ್ತು ಅಬ್ರಹಾಮಿಕ್ ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ. ಮಾತ್ರವಲ್ಲ ಮಾನವೀಯತೆ ಮತ್ತು ನಾಗರಿಕರ ಸುರಕ್ಷತೆ, ಧರ್ಮ ಮತ್ತು ನಂಬಿಕೆಗಳನ್ನು ಲೆಕ್ಕಿಸದೆ ಸ್ವಾತಂತ್ರ್ಯವನ್ನು ಒದಗಿಸುವ ದೇಶದ ಜವಾಬ್ದಾರಿಗೆ ವಿರುದ್ಧವಾಗಿದೆ ಎಂದು ಬಹ್ರೇನ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಹ್ರೇನ್ನ ಭಾರತೀಯ ರಾಯಭಾರಿ ಮೂಲಕ ನಮ್ಮ ನಿಲುವನ್ನು ಭಾರತ ಸರ್ಕಾರಕ್ಕೆ ತಲುಪಿಸುವಂತೆ ಪದೇ ಪದೇ ಕೇಳಿಕೊಂಡಿದ್ದು, ನ್ಯಾಯಸಮ್ಮತವಲ್ಲದ ಕಾರಣಗಳಿಂದ ನುಣುಚಿಕೊಂಡಿದ್ದಾರೆ. ಭಾರತೀಯ ಮುಸ್ಲಿಮರ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಸಂರಕ್ಷಣೆಗಾಗಿ ಪ್ರಪಂಚಾದ್ಯಂತವಿರುವ ಮುಸ್ಲಿಮರು ಒಗ್ಗಟ್ಟಾಗಬೇಕೆಂದು ಅವರು ಕರೆ ನೀಡಿದರು.
ಬಹ್ರೇನ್ ಮತ್ತು ಭಾರತದ ನಡುವಿನ ಅಂತರಾಷ್ಟ್ರೀಯ ವ್ಯಾಪಾರ ವಹಿವಾಟು ವಾರ್ಷಿಕ 105 ಶತಕೋಟಿ ಡಾಲರ್ ಗಳನ್ನು ಮೀರಿದೆ. ಮುಸ್ಲಿಮರ ಮೇಲಿನ ಹಿಂಸಾಚಾರ, ನಿರ್ಬಂಧವನ್ನು ಮುಂದುವರಿಸಿದರೆ ಭಾರತವು ಆರ್ಥಿಕ ದಿಗ್ನಂಧನವನ್ನು ಎದುರಿಸಬೇಕಾಗುತ್ತದೆ ಎಂದು ಅಬ್ದುಲ್ ರಝಾಕ್ ಎಚ್ಚರಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ