ಮಂಗಳೂರು, ನ.15: ಕುಂದಾಪುರ ಮೂಲದ ಮಹಿಳೆಯು ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಅ.15ರಂದು ಮಗುವಿಗೆ ಜನ್ಮ ನೀಡಿದ್ದರು. ಆದರೆ ಈ ಮಗುವನ್ನು ಅದಲು-ಬದಲು ಮಾಡಲಾಗಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದರು. ಈ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಇದು ಭಾರೀ ಸುದ್ದಿಯಾಗಿತ್ತು. ಆ ಹಿನ್ನೆಲೆಯಲ್ಲಿ ಮಗುವಿನ ಡಿಎನ್ಎ ಪರೀಕ್ಷೆಗಾಗಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಆದರೆ ಪರೀಕ್ಷೆಯ ವರದಿ ಬರುವ ಮುನ್ನವೇ ಮಗು ಮೃತಪಟ್ಟಿದೆ. ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಮಗು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ ಮಗುವಿನ ಅಂತ್ಯಸಂಸ್ಕಾರ ಕಾನೂನಿನ ಪ್ರಕಾರವೇ ನಡೆಯಲಿದೆ. ಮಗುವಿನ ಪೋಷಕರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
”ನಮಗೆ ಆಸ್ಪತ್ರೆಯ ಸಿಬ್ಬಂದಿ ಮೊದಲು ಮಗು ಹೆಣ್ಣು ಎಂದು ಹೇಳಿದ್ದರು. ದಾಖಲೆಗಳಲ್ಲಿ ಕೂಡಾ ಅದನ್ನೇ ನಮೂದಿಸಿದ್ದರು. ಆದರೆ ನಮ್ಮ ಕೈಗೆ ಗಂಡು ಮಗುವನ್ನು ಕೊಟ್ಟಿದ್ದರು” ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ”ಮಗುವಿನ ಡಿಎನ್ಎ ಪರೀಕ್ಷೆ ಇನ್ನೂ ಬಂದಿಲ್ಲ. ಅದಕ್ಕಿಂತ ಮುಂಚೆಯೇ ಮಗು ಮೃತಪಟ್ಟಿವೆ. ಆಸ್ಪತ್ರೆಯಲ್ಲಿ ಚೆನ್ನಾಗಿ ಆರೈಕೆ ಮಾಡದ ಕಾರಣ ಹೀಗಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಗುವನ್ನು ಬಿಟ್ಟುಕೊಡುವುದಾಗಿ ವೈದ್ಯರು ತಿಳಿಸಿದರು. ಹಾಗಾಗಿ ನಾವು ಮೃತದೇಹವನ್ನು ಪಡೆದು ಕುಂದಾಪುರ ಮಸೀದಿಯ ಆವರಣದಲ್ಲಿ ದಫನ ಮಾಡುವೆವು. ಆ ಬಳಿಕ ಕಾನೂನು ಹೋರಾಟ ಮುಂದುವರಿಸುವೆವು” ಎಂದು ಪೋಷಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ