ಮಂಗಳೂರು, ನ.15: ಕುಂದಾಪುರ ಮೂಲದ ಮಹಿಳೆಯು ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಅ.15ರಂದು ಮಗುವಿಗೆ ಜನ್ಮ ನೀಡಿದ್ದರು. ಆದರೆ ಈ ಮಗುವನ್ನು ಅದಲು-ಬದಲು ಮಾಡಲಾಗಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದರು. ಈ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಇದು ಭಾರೀ ಸುದ್ದಿಯಾಗಿತ್ತು. ಆ ಹಿನ್ನೆಲೆಯಲ್ಲಿ ಮಗುವಿನ ಡಿಎನ್ಎ ಪರೀಕ್ಷೆಗಾಗಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಆದರೆ ಪರೀಕ್ಷೆಯ ವರದಿ ಬರುವ ಮುನ್ನವೇ ಮಗು ಮೃತಪಟ್ಟಿದೆ. ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಮಗು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ ಮಗುವಿನ ಅಂತ್ಯಸಂಸ್ಕಾರ ಕಾನೂನಿನ ಪ್ರಕಾರವೇ ನಡೆಯಲಿದೆ. ಮಗುವಿನ ಪೋಷಕರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
”ನಮಗೆ ಆಸ್ಪತ್ರೆಯ ಸಿಬ್ಬಂದಿ ಮೊದಲು ಮಗು ಹೆಣ್ಣು ಎಂದು ಹೇಳಿದ್ದರು. ದಾಖಲೆಗಳಲ್ಲಿ ಕೂಡಾ ಅದನ್ನೇ ನಮೂದಿಸಿದ್ದರು. ಆದರೆ ನಮ್ಮ ಕೈಗೆ ಗಂಡು ಮಗುವನ್ನು ಕೊಟ್ಟಿದ್ದರು” ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ”ಮಗುವಿನ ಡಿಎನ್ಎ ಪರೀಕ್ಷೆ ಇನ್ನೂ ಬಂದಿಲ್ಲ. ಅದಕ್ಕಿಂತ ಮುಂಚೆಯೇ ಮಗು ಮೃತಪಟ್ಟಿವೆ. ಆಸ್ಪತ್ರೆಯಲ್ಲಿ ಚೆನ್ನಾಗಿ ಆರೈಕೆ ಮಾಡದ ಕಾರಣ ಹೀಗಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಗುವನ್ನು ಬಿಟ್ಟುಕೊಡುವುದಾಗಿ ವೈದ್ಯರು ತಿಳಿಸಿದರು. ಹಾಗಾಗಿ ನಾವು ಮೃತದೇಹವನ್ನು ಪಡೆದು ಕುಂದಾಪುರ ಮಸೀದಿಯ ಆವರಣದಲ್ಲಿ ದಫನ ಮಾಡುವೆವು. ಆ ಬಳಿಕ ಕಾನೂನು ಹೋರಾಟ ಮುಂದುವರಿಸುವೆವು” ಎಂದು ಪೋಷಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ