ಮಂಗಳೂರು, ನ.15: ಬಜರಂಗ ದಳದ ಮುಖಂಡ ಶರಣ್ ಪಂಪ್ವೆಲ್ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ ಸಹಾಯ ಮಾಡಿದೆ ಎಂದರು.
ಶರಣ್ ಪಂಪ್ವೆಲ್ ಬಿರುವೆರ್ ಕುಡ್ಲದ ಬಗ್ಗೆ ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಬಿರುವರ್ ಕುಡ್ಲ ಕಾನೂನು ಹೋರಾಟ ನಡೆಸಲಿದೆ ಎಂದು ಲಕ್ಷ್ಮೀಶ್ ತಿಳಿಸಿದರು.
ಬಿರುವೆರ್ ಕುಡ್ಲದ ದೀಪು ಶೆಟ್ಟಿಗಾರ್ ಮಾತನಾಡಿ ಶರಣ್ ಪಂಪ್ವೆಲ್ ಸಿಟಿ ಸೆಂಟರ್ ಸಹಿತ ಹಲವು ಮುಸ್ಲಿಮರ ಕೇಂದ್ರಗಳಿಂದ ಗುತ್ತಿಗೆ ಹಿಡಿದು ಸಾಕಷ್ಟು ಹಣ ಸಂಪಾದಿಸುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಹೋರಾಟ ಮಾಡುವ ಅವರಿಗೆ ಮುಸ್ಲಿಮರ ಸಂಸ್ಥೆಯ ಹಣವಾಗುತ್ತದೆ, ಆದರೆ ಮುಸ್ಲಿಂ ಯುವಕರು ಬೇಡವಾಗಿದೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ನಾವು ಹೆಣ ಹೊರುವುದರಿಂದ ಹಿಡಿದು ಮನೆ ಕಟ್ಟಿ ಕೊಡುವವರೆಗೆ ಸಮಾಜ ಸೇವೆ ಮಾಡುತ್ತಿದ್ದೇವೆ. ಬಲ್ಲಾಳ್ ಬಾಗ್ನಲ್ಲಿ ಬಿರುವೆರ್ ಕುಡ್ಲ ಜನಪರ ಕೆಲಸ ಮಾಡಿದೆಯೇ ವಿನಃ ಶರಣ್ ಪಂಪ್ವೆಲ್ರಂತೆ ಸಮಾಜ ಒಡೆಯುವ ಕೆಲಸ ಮಾಡಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಕಿಶೋರ್ ಬಾಬು, ವಿದ್ಯಾ, ರಾಕೇಶ್, ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ