ರಿಯಾದ್ : ಇತ್ತೀಚಿನ ಬೆಳವಣಿಗೆಯ ಪ್ರಕಾರ, ಸೌದಿ ಅರೇಬಿಯಾವು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಅನ್ನು ದೇಶಕ್ಕೆ ಪ್ರವೇಶಿಸಲು ಅನುಮೋದಿತ ಕೋವಿಡ್ ಲಸಿಕೆ ಎಂದು ಗುರುತಿಸಿದೆ. ಹಾಗಾಗಿ, ಪೂರ್ಣ ಪ್ರಮಾಣದಲ್ಲಿ ಈ ಲಸಿಕೆಯನ್ನು ಪಡೆದಿರುವ ಭಾರತೀಯರಿಗೆ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗುವ ಅಗತ್ಯವಿಲ್ಲದೇ, ದೇಶಕ್ಕೆ ಪ್ರವೇಶಿಸಲು ಸೌದಿ ಅರೇಬಿಯಾ ಅನುಕೂಲ ಮಾಡಿಕೊಟ್ಟಿದೆ.
ಇದರೊಂದಿಗೆ , ಕೋವಿಶೀಲ್ಡ್ ಈಗ ದೇಶವು ಅನುಮೋದಿಸಿದ ಎಂಟು ಇತರ ಲಸಿಕೆಗಳ ಪಟ್ಟಿಗೆ ಸೇರಿಕೊಂಡಿದೆ, ಫಿಜರ್ ಬಯೋಎನ್ಟೆಕ್, ಆಕ್ಸ್ಫರ್ಡ್ ಅಸ್ಟ್ರಾಜೆನೆಕಾ, ಕಾಮಿರ್ನಾಟಿ, ಎಸ್ಕೆ ಬಯೋಸೈನ್ಸ್, ಮಾಡರ್ನಾ, ವ್ಯಾಕ್ಸ್ಜೆವ್ರಿಯಾ, ಸ್ಪೈಕ್ವಾಕ್ಸ್ ಮತ್ತು ಜಾನ್ಸನ್ ಮತ್ತು ಜಾನ್ಸನ್ ಸೌದಿ ಅನುಮೋದಿತ ಲಸಿಕೆಗಳಾಗಿವೆ
ಸೌದಿ ಪ್ರವಾಸೋದ್ಯಮ ಪ್ರಾಧಿಕಾರವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಸೌದಿ ಅನುಮೋದಿತ ಲಸಿಕೆಗಳೊಂದಿಗೆ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ ಭಾರತೀಯ ಪ್ರಯಾಣಿಕರು ಈಗ ಸಾಂಸ್ಥಿಕ ಕ್ವಾರಂಟೈನ್ ಇಲ್ಲದೆ ದೇಶವನ್ನು ಪ್ರವೇಶಿಸಲು ಸಾಧ್ಯವಾಗಲಿದೆ ಎಂದು ಹೇಳಿದೆ.
ವರದಿಗಳ ಪ್ರಕಾರ, ಸೌದಿಗೆ ಆಗಮಿಸುವ ಮೊದಲು 14 ದಿನಗಳಲ್ಲಿ ಭಾರತವನ್ನು ಹಾದುಹೋಗುವ ಅಥವಾ ಭಾರತದಿಂದ ಬರುವವರಿಗೆ ಸೌದಿ ಅರೇಬಿಯಾಕ್ಕೆ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದರೂ, ಕೋವಿಶೀಲ್ಡ್ ಅನ್ನು ಮಾನ್ಯತೆ ಪಡೆದ ಲಸಿಕೆಯಾಗಿ ಅನುಮೋದಿಸುವ ಕ್ರಮವು ಸಕಾರಾತ್ಮಕ ಬೆಳವಣಿಗೆಯಾಗಿದೆ. ಭಾರತೀಯ ಪ್ರವಾಸಿಗರಿಗೆ ತನ್ನ ಗಡಿಯನ್ನು ಮತ್ತೆ ತೆರೆಯಲು ಸೌದಿ ಸಜ್ಜಾಗಿದೆ ಎಂಬುದರ ಸೂಚನೆಯಾಗಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ