ಮಾಣಿ, ನ.16: ಕಳೆದ ಮೂರು ದಿನಗಳ ಹಿಂದೆ ಮಾಣಿಯಲ್ಲಿ ಅಪಘಾತ ನಡೆದ ಸ್ಥಳದಲ್ಲಿ ಉಂಟಾದ ಅಮಾನವೀಯ ರೀತಿಯ ಹಲ್ಲೆ ಪ್ರಕರಣದ ವೀಡಿಯೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ನೈಜ ಆರೋಪಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.
ಆರೋಪಿಯನ್ನು ಪತ್ತೆಹಚ್ಚಲು ಆಗದೆ ಮಾಣಿ ಆಸುಪಾಸಿನಲ್ಲಿ ಜಾತಿ,ಸಂಘ,ಪಕ್ಷ, ಬಣ್ಣ ನೋಡದೆ ಜನಸೇವೆ ಮಾಡುವಂತಹ ಎಲ್ಲಾ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಅಮಾಯಕ ವ್ಯಕ್ತಿ SYS ಸೂರಿಕುಮೇರ್ ಬ್ರಾಂಚ್ ಸಂಘಟನೆಯ ನಾಯಕರೂ ಆದಂತಹ ಹನೀಫ್ ಸಂಕ ಎಂಬವರನ್ನು ವಿಚಾರಣೆಯ ನೆಪದಲ್ಲಿ ಬಂಧಿಸಿ ಪ್ರಕರಣ ದಾಖಲಿಸಿರುವುದು ಖಂಡನೀಯ.
ಅ ಘಟನೆ ಯ ವಿಡಿಯೋ ಮತ್ತೋಮ್ಮೆ ಪರಿಶೀಲಿಸಿ ಹನೀಫ್ ಸಂಕ ಅವರನ್ನು ತಕ್ಷಣವೇ ಬಿಡುಗಡೆ ಗೊಳಿಸಬೇಕು, ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು SSF ಮಾಣಿ ಸೆಕ್ಟರ್ ಕಾರ್ಯದರ್ಶಿ ನೌಫಲ್ ಪೇರಮೊಗರ್, ಕೋಶಾಧಿಕಾರಿ ಅನ್ಸಾರ್ ಸತ್ತಿಕಲ್ಲು, ಪುತ್ತೂರು ಡಿವಿಷನ್ ಅಧ್ಯಕ್ಷರಾದ ಹಾಫಿಲ್ ತೌಸೀಫ್ ಅಸ್ಅದಿ, ಸೆಕ್ಟರ್ ಉಸ್ತುವಾರಿ ಸಲಾಮ್ ಹನೀಫಿ ಕಬಕ, ಸದಸ್ಯರಾದ ಮುಸ್ತಫಾ ಬುಡೋಳಿ, ಕೆ.ಪಿ ಖಲಂದರ್ ಪಾಟ್ರಕೋಡಿ, ಸಿದ್ದೀಕ್ ಪೆರ್ನೆ,ಸಾಬಿತ್ ಪಾಟ್ರಕೋಡಿ,ಸಾಜಿದ್ ಅಝೀಝ್ ಸತ್ತಿಕಲ್ಲು ಇವರ ಉಪಸ್ಥಿತಿ ಯಲ್ಲಿ SSF ಮಾಣಿ ಸೆಕ್ಟರ್ ಅಧ್ಯಕ್ಷರಾದ ಸೈಯದ್ ಸಾಬಿತ್ ಸಖಾಫಿ ಪಾಟ್ರಕೋಡಿ ಖಂಡನೆ ಸಭೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ