ರಿಯಾದ್: ವಿಷದ ಪೂರಿತ ಇರುವೆ ಕಚ್ಚಿ ರಿಯಾದ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಕೇರಳೀಯ ಗೃಹಿಣಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆರೋಗ್ಯ ಪರಿಣಿತರು ಎಚ್ಚರಿಕೆ ನೀಡಿದ್ದಾರೆ.
ಸೌದಿಯಲ್ಲಿ ಕಂಡು ಬರುವ ಕಪ್ಪು ಇರುವೆಗಳು ಗಂಭೀರ ವಿಷಪೂರಿತವಾಗಿದೆ.ಇದು ಮನುಷ್ಯನ ಜೀವಕ್ಕೆ ಅಪಾಯವಾಗಿದೆ.
ಸೌದಿಯ ವಾತಾವರಣವು ಶೀತದಿಂದ ಉಷ್ಣತೆಗೆ ಬದಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ವಿಷಪೂರಿತ ಇರುವೆಗಳು ಕಚ್ಚಿದರೆ ಸಮಸ್ಯೆಯು ಇನ್ನಷ್ಟು ಉಲ್ಬಣಗೊಳ್ಳುತ್ತದೆ. ಇದಕ್ಕಾಗಿ, ರಕ್ಷಣಾ ಮಾರ್ಗವನ್ನು ಅಳವಡಿಸಿಕೊಳ್ಳಬೇಕಾಗಿದೆ.
ಚೇಳುಗಳು ಮತ್ತು ಇರುವೆಗಳು ಕಚ್ಚಿದರೆ ತಕ್ಷಣವೇ ಚಿಕಿತ್ಸೆ ಪಡೆಯಬೇಕು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಉದ್ಯಾನವನಗಳಲ್ಲಿ, ಮಕ್ಕಳ ಬಗ್ಗೆ ಗಮನ ಬೇಕು. ಈ ಇರುವೆಗಳ ಕಚ್ಚುವಿಕೆಯಿಂದ ಆಸ್ತಮಾ ಮತ್ತು ಅಲರ್ಜಿ ರೋಗಿಗಳ ಜೀವಕ್ಕೆ ಅಪಾಯವಿದೆ. ಇಂತಹ ರೋಗಿಗಳನ್ನು ಆಸ್ಪತ್ರೆಗೆ ಕರೆತಂದರೆ, ಸಿಪಿಆರ್ ಪ್ರಕ್ರಿಯೆ ಮೂಲಕ ಕೃತಕ ಉಸಿರಾಟವನ್ನು ನೀಡಲು ಕನಿಷ್ಠ 20 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಮೆದುಳಿನ ಸಾವಿನ ನಂತರ, ಜೀವನಕ್ಕೆ ಹಿಂದಿರುಗುವುದು ಕಷ್ಟ ಎಂದು ತಜ್ಞರು ಹೇಳುತ್ತಾರೆ.
ವಿಷಕಾರೀ ಇರುವೆಯ ಕಡಿತಕ್ಕೊಳಗಾಗಿ ರಿಯಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ಅಡೂರ್ ನಿವಾಸಿ ಸೂಸಮ್ಮ ಜೋಸಿ (33) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ವಾಸವಾಗಿದ್ದ ರಿಯಾದ್ ನ ಫ್ಲಾಟ್ ನಲ್ಲಿ ಕಡಿತಕ್ಕೊಳಗಾಗಿ ನೋವು ಮತ್ತು ಬಳಲುವಿಕೆ ಕಠಿಣ ಗೊಂಡಾಗ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
16 ದಿನಗಳು ಆಸ್ಪತ್ರೆಯ ತೀವ್ರ ನಿಘಾ ತೀವ್ರ ನಿಗಾ ಘಟಕದಲ್ಲಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ