ನವದೆಹಲಿ,ನ.19: ದೇಶದ ಅನ್ನದಾತರು ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆ ನಡೆಸುತ್ತಾ ಬಂದಿರುವ, ವಿವಾದಾತ್ಮಕ ಮೂರು ಕೃಷ್ಟಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಮೂರು ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ.
ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆ ಮಾಡಿದ್ದಾರೆ. ರೈತರು ತಮ್ಮ ಪ್ರತಿಭಟನೆಯನ್ನು ವಾಪಾಸು ಪಡೆದು ತಮ್ಮ ಹೊಲಗಳಿಗೆ ಹಿಂತಿರುಗಿ ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಈ ವೇಳೆ ಮನವಿ ಮಾಡಿದ್ದಾರೆ.
ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸರ್ಕಾರ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ನಿಜವಾದ ಮತ್ತು ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ’ ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ನಾವು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸುತ್ತೇವೆ” ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ನೂತನ ಕೃಷಿ ಕಾಯ್ದೆಗೆ ವಿರುದ್ಧವಾಗಿ ಅನ್ನದಾತರು ಸಿಡಿದೆದ್ದರು.ದೇಶಾದ್ಯಂತ ಉಗ್ರ ಪ್ರತಿಭಟನೆಗಳನ್ನು ನಡೆಸಿದರು. ದೆಹಲಿಯಲ್ಲಿ ಇಂದಿಗೂ ಈ ಕಾಯ್ದೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇವೆ.ಈ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಅದೆಷ್ಟೋ ರೈತರು ಪ್ರಾಣ ಕಳೆದುಕೊಂಡರು.
ಕೇಂದ್ರ ಸರ್ಕಾರ ರೈತರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿತಾದರೂ ಅದರಲ್ಲಿ ಯಶಸ್ವಿಯಾಗಲಿಲ್ಲ. ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಇದರ ಬೆನ್ನಲ್ಲೇ ಗುರು ಪೂರಬ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದು, ಮೂರು ಕೃಷಿ ಕಾನೂನುಗಳನ್ನು ವಾಪಾಸ್ ಪಡೆಯಲು ತೀರ್ಮಾನಿಸಿದೆ. ಇದರೊಂದಿಗೆ ವರ್ಷಗಳ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿದೆ.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ