ಜಿದ್ದಾ| ಸೌದಿ ಅರೇಬಿಯಾ ಅನುಮತಿ ನೀಡಿದ್ದರೂ, ಭಾರತದಿಂದ ಸೌದಿ ಅರೇಬಿಯಾಗೆ ನೇರ ವಿಮಾನವನ್ನು ಅನುಮತಿಸದ ಕೇಂದ್ರದ ಮೋದಿ ಸರ್ಕಾರದ ನಿಲುವು ಖಂಡನೀಯವಾಗಿದೆ ಎಂದು ICF ಸೌದಿ ರಾಷ್ಟ್ರೀಯ ಸಮಿತಿ ಹೇಳಿದೆ.
ಕೋವಿಡ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ಥಗಿತಗೊಂಡಿದ್ದ ವಿಮಾನ ಸೇವೆಗಳನ್ನು ಡಿಸೆಂಬರ್ 1 ರಿಂದ ಪುನರಾರಂಭಿಸಲು ಸೌದಿ ಸರಕಾರ ನಿರ್ಧರಿಸಿದೆ. ವರ್ಷಗಳಿಂದ ಕಂಗಾಲಾಗಿದ್ದ ಸೌದಿ ವಲಸಿಗರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಆದರೆ GCC ಯಲ್ಲಿ ಸೌದಿ ಅರೇಬಿಯಾವನ್ನು ಹೊರತುಪಡಿಸಿ ಎಲ್ಲಾ ದೇಶಗಳು ಸಹಿತ 99 ದೇಶಗಳ ಜನರಿಗೆ ಕ್ವಾರಂಟೈನ್ ಕಾರ್ಯವಿಧಾನಗಳ ಮೇಲೆ ರಿಯಾಯಿತಿಗಳನ್ನು ನೀಡಿರುವ ಮೋದಿ ಸರ್ಕಾರವು, ಸೌದಿಯಿಂದ ಆಗಮಿಸುವವರಿಗೆ ಕ್ವಾರಂಟೈನ್ಗೆ ಬದ್ಧವಾಗಿರುವಂತೆ ಕೇಳುತ್ತಿದೆ. ಇದು ಯಾವುದೋ ಹಿಡನ್ ಅಜೆಂಡಾಗಳ ಭಾಗವಾಗಿದೆ ಎಂಬ ಅನುಮಾನವಿದೆ ಎಂದು ICF ಸೌದಿ ರಾಷ್ಟ್ರೀಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ವಲಸಿಗ ಸಮುದಾಯ ಪದೇ ಪದೇ ವಿನಂತಿಸಿದರೂ, ಸೌದಿ ಅರೇಬಿಯಾದೊಂದಿಗೆ ಏರ್ ಬಬಲ್ ಒಪ್ಪಂದಕ್ಕೆ ಪ್ರವೇಶಿಸಲು ಮೋದಿ ಸರ್ಕಾರಕ್ಕೆ ಇಷ್ಟವಿರಲಿಲ್ಲ.
ತನ್ನ ದೇಶದಲ್ಲಿನ ಸ್ವಂತ ನಾಗರಿಕರಿಗೆ ಆಹಾರ ಮತ್ತು ಉದ್ಯೋಗವನ್ನು ನೀಡಲು ಈ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲವೆಂದು ಮಾತ್ರವಲ್ಲ, ವಿದೇಶದಲ್ಲಿ ಕೆಲಸ ಮಾಡುವವರೊಂದಿಗೆ ಮಾನವೀಯತೆಯನ್ನೂ ತೋರಿಸುತ್ತಿಲ್ಲ ಎಂದು ICF, ಮೋದಿ ಸರ್ಕಾರವನ್ನು ದೂಷಿಸಿದೆ.
ಸಯ್ಯಿದ್ ಹಬೀಬ್ ಅಲ್ ಬುಖಾರಿ ಅಧ್ಯಕ್ಷತೆ ವಹಿಸಿದ್ದರು. ಬಶೀರ್ ಎರ್ನಾಕುಳಂ, ನಿಝಾರ್ ಕಾಟ್ಟಿಲ್, ಬಶೀರ್ ಉಳ್ಳನಂ, ಸಲೀಂ ಪಾಲಚ್ಚಿರ, ಝುಬೈರ್ ಸಖಾಫಿ, ಉಮರ್ ಸಖಾಫಿ ಮೂರ್ಕನಾಡ್, ಹುಸನಲಿ ಕಡಲುಂಡಿ ಮುಂತಾದವರು ಭಾಗವಹಿಸಿದ್ದರು. ಸಿರಾಜ್ ಕುಟ್ಯಾಡಿ ಸ್ವಾಗತಿಸಿ, ಮುಹಮ್ಮದಲಿ ವೇಂಗರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು