ಮಂಗಳೂರು :ಕಳೆದ ಇಪ್ಪತ್ತು ವರ್ಷಗಳಿಂದ ಕರ್ನಾಟಕ ಎಸ್ಸೆಸ್ಸೆಫ್ ನಡೆಸಿ ಬರುತ್ತಿರುವ ಪ್ರತಿಭೋತ್ಸವಗಳಿಂದ ನೂರಾರು ಪ್ರತಿಭೆಗಳು ಇಂದು ಸಮಾಜದಲ್ಲಿ ಸಾಧನೆಗಳಿಗೆ ಕಾರಣರಾಗುತ್ತಿದ್ದಾರೆ. ಅವರು ಇತರೆ ಯುವ ಸಮೂಹಕ್ಕೆ ಮಾದರಿಯಾಗಿದ್ದು ನೀವೂ ಕೂಡ ನಿಮ್ಮ ನಂತರದ ಯುವಕರಿಗೆ ಮಾದರಿಯಾಗಬೇಕು ಎಂದು ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ರಾಜ್ಯ ವಖಫ್ ಬೋರ್ಡ್ ಅಧ್ಯಕ್ಷ ಎನ್.ಕೆ.ಎಂ. ಶಾಫೀ ಸಅದಿ ಬೆಂಗಳೂರು ಕರ್ನಾಟಕ ರಾಜ್ಯ
ಹಮ್ಮಿಕೊಂಡ ಪ್ರತಿಭೋತ್ಸವದಲ್ಲಿ ಅವರು ಮಾತನಾಡುತ್ತಾ ಹೇಳಿದರು.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸ’ಅದಿ ಶಿವಮೊಗ್ಗ ಅಧ್ಯಕ್ಷತೆ ವಹಿಸಿದ್ದರು. ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಖಫ್ ಬೋರ್ಡ್ ನೂತನ ಅಧ್ಯಕ್ಷರಾದ ಮೌಲಾನಾ ಎನ್ ಕೆ.ಎಂ ಶಾಫಿ ಸಅದಿ ಬೆಂಗಳೂರುರವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ, ಖಾಝಿ ಇಬ್ರಾಹಿಮ್ ಮುಸ್ಲಿಯಾರ್, ಇನ್ಫಾಲ್ ಮಾಲಿಕ ನಾಸಿರ್ ಚಿಕ್ಕಮಗಳೂರು, ಯಾಕೂಬ್ ಯೂಸುಫ್ ಶಿವಮೊಗ್ಗ, ಶರೀಫ್ ಹಾಜಿ, ಐ.ಎನ್.ಸಿ.ಅಧ್ಯಕ್ಷ ಶೇಖ್ ಬಾವ ದುಬೈ, ಬಿ.ಎಂ. ಮುಮ್ತಾಜ್ ಅಲಿ,ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ, ಮೊದಲಾದವರು ಉಪಸ್ಥಿತರಿದ್ದರು.
ಪ್ರತಿಭೋತ್ಸವ ಸಮಿತಿ ಚಯರ್ಮೇನ್ ಕೆ.ಎಂ ಮುಸ್ತಫಾ ನ’ಈಮೀ ಸ್ವಾಗತಿಸಿದರು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು