ಹೊಸದಿಲ್ಲಿ: ಕೊರೊನಾ ವೈರಸ್ನ ಹೊಸ ರೂಪಾಂತರಿ ತಳಿ ‘ಒಮಿಕ್ರಾನ್’ ವಿಶ್ವಾದ್ಯಂತ ಮತ್ತೊಮ್ಮೆ ಭಯ ಹುಟ್ಟಿಸಿದೆ. ಈ ಬೆನ್ನಲ್ಲೇ ವಿದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳು ಡಿಸೆಂಬರ್ 1ರಿಂದಲೇ ಅನ್ವಯವಾಗುತ್ತವೆ ಎಂದು ತಿಳಿಸಿದೆ.
ಭಾರತಕ್ಕೆ ಆಗಮಿಸುವ ಪ್ರಯಾಣಿಕರು, ಆಗಮಿಸುವ ದಿನಾಂಕಕ್ಕಿಂತ ಮೊದಲ14 ದಿನಗಳ ಪ್ರಯಾಣದ ವಿವರಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಪ್ರಯಾಣಕ್ಕೂ ಮೊದಲು ಕೋವಿಡ್ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ ವರದಿಯನ್ನು ಏರ್ ಸುವಿಧಾ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು. ಕೋವಿಡ್ ವರದಿ ನೆಗೆಟಿವ್ ಬಂದರಷ್ಟೇ ಭಾರತಕ್ಕೆ ಆಗಮಿಸಲು ಅವಕಾಶ ಎಂದು ಕೇಂದ್ರ ಆರೋಗ್ಯ ಸಚಿವಾಲಯ ನೂತನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪ್ರಕಾರ, ತೀವ್ರ ‘ಅಪಾಯದಲ್ಲಿರುವ ದೇಶಗಳ’ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ ನಂತರವೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಅಲ್ಲದೆ ಫಲಿತಾಂಶ ಬರುವವರೆಗೂ ವಿಮಾನ ನಿಲ್ದಾಣದಲ್ಲಿಯೇ ಕಾಯುಬೇಕು ಎಂದು ತಿಳಿಸಿದೆ.
ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ, ಪ್ರಯಾಣಿಕರು 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು. 8 ನೇ ದಿನದಲ್ಲಿ ಮತ್ತೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ತೀವ್ರ ಅಪಾಯದಲ್ಲಿರುವ ದೇಶಗಳ ಪಟ್ಟಿಯಲ್ಲಿ ಬ್ರಿಟನ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸ್ವಾನ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಸಿಂಗಾಪುರ, ಜಿಂಬಾಬ್ವೆ, ಹಾಂಗ್ ಕಾಂಗ್ ಮತ್ತು ಇಸ್ರೇಲ್ ಸೇರಿವೆ.
ತೀವ್ರ ‘ಅಪಾಯದಲ್ಲಿರುವ ದೇಶಗಳನ್ನು’ ಹೊರತುಪಡಿಸಿ, ಉಳಿದ ಇತರೆ ದೇಶಗಳಿಂದ ಆಗಮಿಸುವ ಪ್ರಯಾಣಿಕರು ಪರೀಕ್ಷಾ ವರದಿಗಾಗಿ ಕಾಯುವ ಅಗತ್ಯವಿಲ್ಲ. ಆದರೆ, ಅವರು ಕೂಡ 14 ದಿನಗಳವರೆಗೆ ಸೆಲ್ಫ್ ಕ್ವಾರಂಟೈನ್ನಲ್ಲಿ ಇರಬೇಕು. ಆದರೆ, ವಿಮಾನ ನಿಲ್ದಾಣದಲ್ಲಿ ಆಗಾಗಗ್ಗೆ ಯಾದೃಚ್ಛಿಕವಾಗಿ ಆಗಮನದ ನಂತರದ ಪರೀಕ್ಷೆಗೆ ಮಾಡಲಾಗುತ್ತದೆ.
ದಕ್ಷಿಣ ಆಫ್ರಿಕಾ, ಇಟಲಿ, ಜರ್ಮನಿ, ನೆಸರ್ಲ್ಯಾಂಡ್ಸ್, ಬ್ರಿಟನ್, ಇಸ್ರೇಲ್, ಹಾಂಕಾಂಗ್, ಬೋಟ್ಸ್ವಾನಾ ಮತ್ತು ಬೆಲ್ಜಿಯಂನಲ್ಲಿ ಈವರೆಗಿನ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ತೀವ್ರ ಎಚ್ಚರಿಕೆ ವಹಿಸುವಂತೆ ಶುಕ್ರವಾರವೇ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಭಾನುವಾರ ಎಲ್ಲ ರಾಜ್ಯಗಳಿಗೂ ಮತ್ತೊಂದು ಪತ್ರ ಬರೆದಿದ್ದಾರೆ. ರಾಜ್ಯಗಳು ಕೋವಿಡ್ 19 ಹಾಟ್ಸ್ಪಾಟ್ಗಳ ಮೇಲೆ ನಿಗಾ ಇರಿಸುವುದನ್ನು ಮುಂದುವರಿಸಬೇಕು. ಈಗಾಗಲೇ ಹೊಸ ತಳಿ ಕಂಡುಬಂದಿರುವ ದೇಶಗಳನ್ನು ಅಪಾಯದಲ್ಲಿ ಇವೆ ಎಂದು ಸರ್ಕಾರ ಗುರುತಿಸಿದೆ. ಹೀಗಾಗಿ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ