ಮಥುರ: ಇಲ್ಲಿನ ಅತಿ ಪುರಾತನ ಮಸೀದಿಯಲ್ಲಿ ಬಲವಂತವಾಗಿ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಹಿಂದೂ ಮಹಾಸಭಾ ಈ ಹೇಳಿಕೆಯ ಮುಖಾಂತರ ಮತ್ತೆ ಅಶಾಂತಿಯ ವಾತಾವರಣ ಸೃಷ್ಟಿಸಲು ಮುಂದಾಗಿದೆ.
ದೇವಾಲಯದ ಹತ್ತಿರವೇ ಮಸೀದಿ ಇದ್ದು, ಹಿಂದೂ ಮಹಾಸಭಾದೊಂದಿಗೆ ಮತ್ತೊಂದು ಸಂಘಟನೆಯಾದ ನರಾಯಣಿ ಸೇನಾ, ಮಸೀದಿಯ ತೆರವಿಗೆ ಆಗ್ರಹಿಸಿ ವಿಶ್ರಮ್ ಘಾಟ್ ನಿಂದ ಕೃಷ್ಣ ಜನ್ಮಸ್ಥಾನದವರೆಗೆ ಜಾಥ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದು, ಯಾರಿಗೂ ಶಾಂತಿ ಕದಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಹಾಲ್ ತಿಳಿಸಿದ್ದಾರೆ.
ಸೆಕ್ಷನ್ 144 ಸಿಆರ್ ಪಿಸಿ ಜಾರಿಯಾದಲ್ಲಿ ಆ ಪ್ರದೇಶದ ಸುತ್ತ ಮುತ್ತ ನಾಲ್ಕು ಮಂದಿಗಿಂತಲೂ ಹೆಚ್ಚಿನ ಜನರು ಸೇರುವುದನ್ನು ನಿರ್ಬಂಧಿಸಲಾಗುತ್ತದೆ. ನಾರಾಯಣಿ ಸೇನಾ ಕಾರ್ಯದರ್ಶಿ ಅಮಿತ್ ಮಿಶ್ರಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಧಾರ್ಮಿಕ ಪ್ರದೇಶಗಳಲ್ಲಿ ಎಸ್ ಪಿ ಭದ್ರತೆಯನ್ನು ಪರಿಶೀಲನೆ ನಡೆಸಿದ್ದಾರೆ. ಮಹಾಸಭಾದವರು ವಿಗ್ರಹ ಸ್ಥಾಪನೆ ಮಾಡುವುದಕ್ಕಾಗಿ ಮನವಿ ಸಲ್ಲಿಸಿತ್ತು. ಆದರೆ ಅನುಮತಿ ನಿರಾಕರಿಸಲಾಗಿದೆ ಎಂದು ಚಹಾಲ್ ಹೇಳಿದ್ದಾರೆ.
ಸ್ಥಳೀಯ ನ್ಯಾಯಾಲಯ ಅರ್ಜಿ ವಿಚಾರಣೆ!
17ನೇ ಶತಮಾನದ ಮಸೀದಿಯನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸ್ಥಳೀಯ ನ್ಯಾಯಾಲಯವು ವಿಚಾರಣೆ ನಡೆಸುತ್ತಿರುವ ಸಮಯದಲ್ಲಿ ಈದ್ಗಾದಲ್ಲಿ ವಿಗ್ರಹ ಸ್ಥಾಪಿಸುವ ಬೆದರಿಕೆ ಬಂದಿದೆ. ಆದರೆ, ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಮತ್ತು ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಮಥುರಾದಲ್ಲಿರುವ ಕ್ವಾಮಿ ಏಕತಾ ಮಂಚ್ನ ಸದಸ್ಯರು ಡಿಸೆಂಬರ್ 6 ರಂದು ಹೆಚ್ಚುವರಿ ಭದ್ರತೆ ಒದಗಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ