ಹೊಸದಿಲ್ಲಿ: ಎನ್ಡಿಎ ಮಿತ್ರಪಕ್ಷ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ನಾಯಕಿ ಅಗಾಥಾ ಸಂಗ್ಮಾ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಎನ್ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಸಂಗ್ಮಾ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆಯೇ ಈಶಾನ್ಯ ರಾಜ್ಯಗಳಲ್ಲಿ ಸಾರ್ವಜನಿಕ ಭಾವನೆಗಳನ್ನು ಗೌರವಿಸಿ ಸಿಎಎ ಹಿಂಪಡೆಯಲು ಒತ್ತಾಯಿಸಿದ್ದೇನೆ ಎಂದು ಅಗಾಥಾ ಸಂಗ್ಮಾ ಸುದ್ದಿ ಸಂಸ್ಥೆಗೆ ತಿಳಿಸಿದರು. ಸರ್ಕಾರದ ಪ್ರತಿಕ್ರಿಯೆ ಏನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ಎನ್ಡಿಎ ಮೈತ್ರಿಕೂಟದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಅಗಾಥಾ ಸಂಗ್ಮಾ ಅವರು ಮೇಘಾಲಯದ ತುರಾ ಕ್ಷೇತ್ರದ ಸಂಸದರಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ