ಬೆಳ್ತಂಗಡಿ, ಡಿ. 06:ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕಿನ ಸುನ್ನತ್ ಕೆರೆ ಜಂಕ್ಷನ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ನಿಸಾರ್ ಕುದ್ರಡ್ಕ ನೇತೃತ್ವ ವಹಿಸಿದ್ದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಮಾತನಾಡುತ್ತ “ಬಾಬರಿ ಮಸೀದಿ ಧ್ವಂಸವು ಸ್ವಾತಂತ್ರ್ಯ ಭಾರತ ಕಂಡ ಎರಡನೇ ಭಯೋತ್ಪಾದಕ ಕೃತ್ಯವಾಗಿದೆ. ಸುಪ್ರೀಂ ಕೋರ್ಟ್ ಅನ್ಯಾಯದ ತೀರ್ಪು ನೀಡಿದೆ. ಆರೋಪಿಗಳಿಗೆ ಶಿಕ್ಷೆಯಾಗಬೇಕು ಹಾಗೂ ಧ್ವಂಸವಾದ ಸ್ಥಳದಲ್ಲೇ ಬಾಬರಿ ಮಸೀದಿ ಪುನರ್ ನಿರ್ಮಿಸಬೇಕು” ಎಂದು ಆಗ್ರಹಿಸಿದರು.
ಉಪಾಧ್ಯಕ್ಷರಾದ ಹನೀಫ್ ಪುಂಜಲ್ ಕಟ್ಟೆ, ಸಮಿತಿ ಸದಸ್ಯರಾದ ಸಾಲಿ ಮದ್ದಡ್ಕ, ಕುವೆಟ್ಟು ಬ್ಲಾಕ್ ಕಾರ್ಯದರ್ಶಿ ಸಮೀಮ್ ಯೂಸುಫ್, ಕುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷರಾದ ದಾವೂದ್ ಜಿ.ಕೆರೆ ಉಪಸ್ಥಿತರಿದ್ದರು. ನವಾಝ್ ಸುನ್ನತ್ ಕೆರೆ ಯವರು ಬಾಬರಿ ಮಸ್ಜಿದ್ ಹಾಡಿನೊಂದಿಗೆ ಪ್ರತಿಭಟನೆ ಕೊನೆಗೊಂಡಿತು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ