ಬೆಂಗಳೂರು: ಕೊರೊನಾ 3ನೆಯ ಅಲೆ ಬೀಸುತ್ತಿದ್ದಂತೆ ಎಚ್ಚೆತ್ತಿರುವ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯಾದ್ಯಂತ ಶಾಲೆಗಳ ಆರಂಭಕ್ಕೆ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
- ಪ್ರತಿದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗೆ ಅವಕಾಶ ನೀಡಲಾಗಿದೆ.
- ಶಾಲೆಗೆ ಬರುವುದಕ್ಕೆ ಪೋಷಕರ ಅನುಮತಿ ಪತ್ರ ತರಬೇಕು.
- ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
- ವಿದ್ಯಾರ್ಥಿಗಳಿಗೆ ಭೌತಿಕ ಹಾಜರಾತಿ ಕಡ್ಡಾಯವಿರುವುದಿಲ್ಲ. .
- ಮಗುವಿಗೆ ಕೊರೊನಾ ಲಕ್ಷಣ ಇಲ್ಲದ ಕುರಿತು ಪೋಷಕರು ದೃಢಪಡಿಸಬೇಕು.
ಎಂಬ ಮಾರ್ಗಸೂಚಿಗಳು ಅನಾವರಣಗೊಂಡಿವೆ..
ಎಲ್ಲ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ. ಆನ್ಲೈನ್ / ಪರ್ಯಾಯ ವಿಧಾನದಲ್ಲಿ ಹಾಜರಿಗೂ ಅಸ್ತು ಎನ್ನಲಾಗಿದೆ. ಶಾಲೆಗೆ ಹಾಜರಾಗಲು ಬಯಸದಿರುವವರಿಗೆ ಒತ್ತಾಯವಿಲ್ಲ. ಆದರೆ ಆಯಾಯ ಕಾಲಕ್ಕೆ ಸರ್ಕಾರದ ಸೂಚನೆ ಪಾಲನೆ ಕಡ್ಡಾಯವಿರುತ್ತದೆ.
ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಚತೆ:
ಶಾಲೆಗಳ ಆರಂಭದಲ್ಲಿ ಪಾಲನೆಯಾಗುತ್ತಿದ್ದ ಗೈಡ್ ಲೈನ್ಸ್ ಟೈಟ್ ರೂಲ್ಸ್ ಪಾಲನೆಯೊಂದಿಗೆ ಮತ್ತೆ ಜಾರಿಗೆ. ಶೇ. 50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶವಿದೆ.ಅದೂ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್ ಆಗಿರುತ್ತವೆ.
ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಚತಾ ಕಾರ್ಯ, ಸ್ಯಾನಿಟೈಸೇಶನ್ಗೆ ಅವಕಾಶ ನೀಡಲಾಗಿದೆ. ಮಕ್ಕಳಿಗೆ ಒಂದು ದಿನ ತರಗತಿ, ಒಂದು ದಿನ ರಜೆ ಇರಲಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. 15 ರಿಂದ 20 ಮಕ್ಕಳ ತಂಡ ರಚಿಸಿಕೊಂಡು, ಮಕ್ಕಳಿಗೆ ಪಾಠ ಮಾಡಬೇಕು. ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಇರಲೇಬೇಕು.
ಜನರ ದಿವ್ಯ ನಿರ್ಲಕ್ಷ್ಯ:
ಈ ಮಧ್ಯೆ, ರಾಜ್ಯದಲ್ಲಿ ರೂಪಾಂತರಿ ಒಮಿಕ್ರಾನ್ ಆತಂಕವಿದ್ದರೂ ಎಲ್ಲೆಡೆ ನಿರ್ಲಕ್ಷ್ಯ ಮೇರೆಮೀರಿದೆ. ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರದಿಂದ ಆದೇಶ ಹೊರಬಿದ್ದಿದೆ. ಆದರೆ ರಾಜ್ಯ ಸರ್ಕಾರದ ಆದೇಶವನ್ನು ಜನ ಪಾಲಿಸುತ್ತಿಲ್ಲ.
ಮಂಗಳೂರು, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಗದಗ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಜನರಿಂದ ಕೊವಿಡ್ ಗೈಡ್ಲೈನ್ಸ್ ಬ್ರೇಕ್ ಮಾಡಲಾಗುತ್ತಿದೆ
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)