ದೆಹಲಿ: ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ಹರಡುವ ಭೀತಿಯಿಂದ ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರ ಜನವರಿ 31 ರವರೆಗೆ ವಿಸ್ತರಿಸಿದೆ.ಅಂತಾರಾಷ್ಟ್ರೀಯ ವಿಮಾನಯಾನ ಡಿಸೆಂಬರ್ 15 ರಿಂದ ಪುನಾರಂಭಗೊಳ್ಳಲಿದೆ ಎಂದು ಈ ಹಿಂದೆ ಹೇಳಲಾಗಿತ್ತು.
ಆದಾಗ್ಯೂ, ಹಲವಾರು ರಾಷ್ಟ್ರಗಳಲ್ಲಿ ಹೊಸ ‘ಒಮಿಕ್ರಾನ್’ ರೂಪಾಂತರಿ ಏಕಾಏಕಿ ಹೊರಹೊಮ್ಮಿದ್ದು ದೇಶವು ಈಗ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭದ ಯೋಜನೆಗಳಿಗೆ ಬ್ರೇಕ್ ಹಾಕಿದೆ. ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ವಿಸ್ತರಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈ ಬಗ್ಗೆ ಹೊರಡಿಸಿದ ಸುತ್ತೋಲೆಯಲ್ಲಿ ಈ ನಿರ್ಬಂಧವು ಅಂತರರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳಿಗೆ ಮತ್ತು ನಿರ್ದಿಷ್ಟವಾಗಿ ಅನುಮೋದಿಸಲಾದ(ಏರ್ ಬಬಲ್) ಹಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ಹೇಳಿದೆ.
ಕೇಸ್-ಟು-ಕೇಸ್ ಆಧಾರದ ಮೇಲೆ ಆಯ್ದ ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನಗಳನ್ನು ಅನುಮತಿಸಬಹುದು ಎಂದು ಅದು ಹೇಳಿದೆ. ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಅಂತರಾಷ್ಟ್ರೀಯ ಪ್ರಯಾಣದ ಬಗ್ಗೆ ಕಾಳಜಿಯ ಹೊಸ ಅಲೆಯನ್ನು ಹುಟ್ಟುಹಾಕಿದೆ. ಇದು ಹಲವಾರು ರಾಷ್ಟ್ರಗಳಿಂದ ಹೊಸ ಪ್ರಯಾಣ ಕ್ರಮಗಳನ್ನು ಹೇರಲು ಕಾರಣವಾಗಿದೆ.
ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು “ಅಪಾಯದಲ್ಲಿರುವ” ದೇಶಗಳಿಂದ ಆಗಮಿಸುವ ಮತ್ತು ಅವರ ಕಡ್ಡಾಯ ಕೊವಿಡ್ ಪರೀಕ್ಷೆಯನ್ನು ಮುಂಚಿತವಾಗಿ ಕಾಯ್ದಿರಿಸಿದ ಪ್ರಯಾಣಿಕರಿಗಾಗಿ 20 ಮೀಸಲಾದ ಕೌಂಟರ್ಗಳನ್ನು ಸ್ಥಾಪಿಸಿದ್ದಾರೆ. ಹೊಸ ಪ್ರಯಾಣ ಮಾರ್ಗಸೂಚಿಗಳ ಅನುಷ್ಠಾನದ ನಂತರ ಟರ್ಮಿನಲ್ನಲ್ಲಿ ಜನಸಂದಣಿ ಇದೆ ಎಂದು ಹಲವಾರು ಪ್ರಯಾಣಿಕರು ದೂರಿದ ನಂತರ ಇದು ಸಂಭವಿಸಿದೆ.
ಒಮಿಕ್ರಾನ್ ಎಚ್ಚರಿಕೆಯ ನಡುವೆ ಕಳೆದ ವಾರ ಹೊರಡಿಸಲಾದ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, “ಅಪಾಯದಲ್ಲಿರುವ” ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಇತರ ದೇಶಗಳಿಂದ ಬರುವ ಶೇಕಡಾ ಐದು ಪ್ರಯಾಣಿಕರು ಸಹ ಪರೀಕ್ಷೆಗೊಳಗಾಗಬೇಕಾಗುತ್ತದೆ.
ಕೊರೊನಾವೈರಸ್ ಕಾರಣದಿಂದ ಮಾರ್ಚ್ 2020 ರಲ್ಲಿ ವಾಣಿಜ್ಯ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಲಾಯಿತು ಮತ್ತು 20 ತಿಂಗಳ ವಿರಾಮದ ನಂತರ ಡಿಸೆಂಬರ್ 15 ರಿಂದ ಪುನರಾರಂಭಿಸುವುದಾಗಿ ಸರ್ಕಾರ ನವೆಂಬರ್ 26 ರಂದು ಘೋಷಿಸಿತು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ