ಅಯೋಧ್ಯೆ: ಕಾಲೇಜು ಪ್ರವೇಶಾತಿಗಾಗಿ ನಕಲಿ ಅಂಕಪಟ್ಟಿ ಬಳಸಿದ ಆರೋಪಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಅಯೋಧ್ಯೆಯ ಗೋಸಾಯಿಗಂಜ್ನ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ವಿಧಾನಸಭೆಯ ಸದಸ್ಯತ್ವ ಕಳೆದುಕೊಂಡಿದ್ದಾರೆ.
28 ವರ್ಷಗಳ ಹಿಂದೆ ಕಾಲೇಜು ಪ್ರವೇಶಾತಿಗಾಗಿ ನಕಲಿ ಅಂಕಪಟ್ಟಿ ಬಳಸಿದ್ದಕ್ಕಾಗಿ ವಿಶೇಷ ನ್ಯಾಯಾಲಯವು ಖಬ್ಬು ತಿವಾರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ವಿಧಾನಸಭಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ ಇಂದ್ರ ಪ್ರತಾಪ್ ರನ್ನು ಉತ್ತರ ಪ್ರದೇಶದ ವಿಧಾನಸಭೆಯ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಯೋಧ್ಯೆ ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲ ಯದುವಂಶ್ ರಾಮ್ ತ್ರಿಪಾಠಿ ಅವರು ತಿವಾರಿ ವಿರುದ್ಧ ನಕಲಿ ಅಂಕಪಟ್ಟಿ ಬಳಕೆಗೆ ಸಂಬಂಧಿಸಿದಂತೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಅಯೋಧ್ಯೆಯ ವಿಶೇಷ ನ್ಯಾಯಾಲಯದ ನ್ಯಾಯಧೀಶ ಪೂಜಾ ಸಿಂಗ್ ಅವರು ಅಕ್ಟೋಬರ್ 18ರಂದು ತೀರ್ಪು ನೀಡಿದ್ದರು. ನಂತರ ಇಂದ್ರ ಪ್ರತಾಪ್ ರನ್ನು ಜೈಲಿಗೆ ರವಾನಿಸಲಾಯಿತು.
ಯುಪಿಯ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಖಬ್ಬು ತಿವಾರಿ ಅವರ ಸದಸ್ಯತ್ವವನ್ನು ಅಕ್ಟೋಬರ್ 18 ರಿಂದ ಕೊನೆಗೊಳಿಸಲಾಗುತ್ತದೆ ಎಂದು ಪರಿಗಣಿಸಲಾಗಿದೆ.2017ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ