ಅಯೋಧ್ಯೆ: ಕಾಲೇಜು ಪ್ರವೇಶಾತಿಗಾಗಿ ನಕಲಿ ಅಂಕಪಟ್ಟಿ ಬಳಸಿದ ಆರೋಪಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಅಯೋಧ್ಯೆಯ ಗೋಸಾಯಿಗಂಜ್ನ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ವಿಧಾನಸಭೆಯ ಸದಸ್ಯತ್ವ ಕಳೆದುಕೊಂಡಿದ್ದಾರೆ.
28 ವರ್ಷಗಳ ಹಿಂದೆ ಕಾಲೇಜು ಪ್ರವೇಶಾತಿಗಾಗಿ ನಕಲಿ ಅಂಕಪಟ್ಟಿ ಬಳಸಿದ್ದಕ್ಕಾಗಿ ವಿಶೇಷ ನ್ಯಾಯಾಲಯವು ಖಬ್ಬು ತಿವಾರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ವಿಧಾನಸಭಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ ಇಂದ್ರ ಪ್ರತಾಪ್ ರನ್ನು ಉತ್ತರ ಪ್ರದೇಶದ ವಿಧಾನಸಭೆಯ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಯೋಧ್ಯೆ ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲ ಯದುವಂಶ್ ರಾಮ್ ತ್ರಿಪಾಠಿ ಅವರು ತಿವಾರಿ ವಿರುದ್ಧ ನಕಲಿ ಅಂಕಪಟ್ಟಿ ಬಳಕೆಗೆ ಸಂಬಂಧಿಸಿದಂತೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಅಯೋಧ್ಯೆಯ ವಿಶೇಷ ನ್ಯಾಯಾಲಯದ ನ್ಯಾಯಧೀಶ ಪೂಜಾ ಸಿಂಗ್ ಅವರು ಅಕ್ಟೋಬರ್ 18ರಂದು ತೀರ್ಪು ನೀಡಿದ್ದರು. ನಂತರ ಇಂದ್ರ ಪ್ರತಾಪ್ ರನ್ನು ಜೈಲಿಗೆ ರವಾನಿಸಲಾಯಿತು.
ಯುಪಿಯ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಖಬ್ಬು ತಿವಾರಿ ಅವರ ಸದಸ್ಯತ್ವವನ್ನು ಅಕ್ಟೋಬರ್ 18 ರಿಂದ ಕೊನೆಗೊಳಿಸಲಾಗುತ್ತದೆ ಎಂದು ಪರಿಗಣಿಸಲಾಗಿದೆ.2017ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ